Webdunia - Bharat's app for daily news and videos

Install App

ತುಂಗಭದ್ರಾ ಅಣೆಕಟ್ಟೆಗೆ ಗೇಟ್‌ ಇಳಿಸುವ ಕಾರ್ಯ ಆರಂಭ: ವಿಡಿಯೊಗ್ರಫಿ ಸಂಪೂರ್ಣ ನಿಷೇಧ

Sampriya
ಗುರುವಾರ, 15 ಆಗಸ್ಟ್ 2024 (14:08 IST)
ವಿಜಯನಗರ: ಇಲ್ಲಿನ ತುಂಗಭದ್ರಾ ಅಣೆಕಟ್ಟೆಯ 19ನೇ ಗೇಟ್‌ನ ತೂಬಿಗೆ ತಾತ್ಕಾಲಿಕ ಗೇಟ್ ಅಳವಡಿಸುವ ಪ್ರಯತ್ನ ಆರಂಭಗೊಂಡಿದೆ.  ಇಂದು ಮಧ್ಯಾಹ್ನ ಗೇಟ್‌ ಇಳಿಸುವ ಪ್ರಾಯೋಗಿಕ ಪರೀಕ್ಷೆ ಶುರು ಮಾಡಲಾಗಿದೆ.

ಕ್ರಸ್ಟ್ ಗೇಟ್ ತಜ್ಞ ಕನ್ನಯ್ಯ ನಾಯ್ಡು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ವಿಡಿಯೊಗ್ರಫಿಯನ್ನು ಸಂಪೂರ್ಣ ನಿಷೇಧಿಸಲಾಗಿದೆ.

ಮೊದಲ ಗೇಟ್ ಅನ್ನು ಗುರುವಾರ ಬೆಳಿಗ್ಗೆ ತುಂಗಭಧ್ರಾ ಅಣೆಕಟ್ಟೆಯ ಬಲದಂಡೆಗೆ ತರಲಾಗಿತ್ತು. ಮಧ್ಯಾಹ್ನ 12.30ರ ಸುಮಾರಿಗೆ 24 ಗಾಲಿಗಳನ್ನು ಒಳಗೊಂಡ ಬೃಹತ್ ಟ್ರಕ್‌ ಸುಮಾರು 13 ಟನ್‌ ತೂಕದ ಗೇಟ್ ಎಲಿಮೆಂಟ್ ಅನ್ನು ಅಣೆಕಟ್ಟೆಯ ಒಳಗೆ ಕೊಂಡೊಯ್ದಿತು. 19ನೇ ಗೇಟ್‌ ಸಮೀಪಕ್ಕೆ ತಲುಪಿದ ತಕ್ಷಣ ಧುಮ್ಕಿಕ್ಕಿ ಹರಿಯುತ್ತಿರುವ ನೀರಲ್ಲೇ ಗೇಟ್ ಇಳಿಸುವ ಪ್ರಯೋಗ ಆರಂಭವಾಯಿತು.

ತುಂಗಭದ್ರಾ ಅಣೆಕಟ್ಟೆಯ ಕೆಳಭಾಗದಲ್ಲಿ ನದಿ ಎರಡು ಕವಲಾಗಿ ಹರಿಯುತ್ತದೆ. ಇಲ್ಲಿಯೇ ಹಳೆ ಸೇತುವೆ ಸಹ ಹಾದು ಹೋಗುತ್ತದೆ. ಅಲ್ಲಿಗೆ ಸಹ ಜನರು ತೆರಳುವುದಕ್ಕೆ ಸದ್ಯ ಅವಕಾಶ ಇಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

Chinnaswamy Stampede: ಸ್ಥಳದಲ್ಲಿದ್ದವರು ಪ್ರಾಣ ಉಳಿಸಲು ಯತ್ನಿಸಿದರು: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣವೇನು video

Animal Attack: MPಯ ಬರ್ವಾನಿಯಲ್ಲಿ 6ಮಂದಿ ಸಾವು, ಹಲವರಿಗೆ ಗಾಯ

Pakistan: ಗನ್‌ ಜತೆ 200 ಕೈದಿಗಳು ಪರಾರಿ, ಜೈಲಿನಲ್ಲೇ ಹೀಗಾದ್ರೇ ಇನ್ನೇನ್ ಕತೆ

RCB Victory Parade: ಕಾಲ್ತುಳಿತದಲ್ಲಿ ಮೂವರು ಫ್ಯಾನ್ಸ್ ಸಾವು, ಹಲವು ಮಂದಿಗೆ ಗಾಯ

ಮುಂದಿನ ಸುದ್ದಿ
Show comments