ದಿನೇಶ್ ಗುಂಡೂರಾವ್ ಹಾಗೂ ಸಚಿವ ಅನಂತಕುಮಾರ್ ಹೆಗಡೆ ನಡುವೆ ಟ್ವೀಟ್ ವಾರ್

Webdunia
ಸೋಮವಾರ, 28 ಜನವರಿ 2019 (11:44 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರಾಗಿರುವ ದಿನೇಶ್ ಗುಂಡೂರಾವ್ ಹಾಗೂ ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ನಡುವೆ ವೈಯಕ್ತಿಕ ವಿಚಾರದ ಕುರಿತು ಟ್ವೀಟ್ ವಾರ್ ಶುರುವಾಗಿದೆ.


ಕೇಂದ್ರ ಸಚಿವರಾದ ಅನಂತಕುಮಾರ್ ಹೆಗಡೆ ತಮ್ಮ ಭಾಷಣದಲ್ಲಿ ಹಿಂದೂ ಹುಡುಗಿ ಮುಟ್ಟುವ ಯುವಕನ ಕೈ ಇರಬಾರದು ಎಂಬ ಹೇಳಿಕೆಯನ್ನು ನೀಡಿದ್ದರು. ಈ ಸಂಬಂಧ ದಿನೇಶ್ ಗುಂಡೂರಾವ್, ಕೇಂದ್ರ ಸಚಿವರಾಗಿ ನಿಮ್ಮ ಸಾಧನೆ ಏನು? ಕರ್ನಾಟಕಕ್ಕೆ ನೀವು ನೀಡಿದ ಕೊಡುಗೆ ಏನು? ನಿಮ್ಮನ್ನು ಆಯ್ಕೆ ಮಾಡಿದ ಕ್ಷೇತ್ರದ ಜನರನ್ನು ನೋಡಿದ್ರೆ ನನಗೆ ನೋವಾಗುತ್ತದೆ ಎಂದು ಟ್ವಿಟ್  ಮಾಡಿದ್ದರು.


ಈ ಟ್ವೀಟ್‍ಗೆ ಪ್ರತಿಕ್ರಿಯಿಸಿದ ಅನಂತಕುಮಾರ್ ಹೆಗಡೆ, ನಾನು ಈ ವ್ಯಕ್ತಿಯ ಪ್ರಶ್ನೆಗಳಿಗೆ ಖಂಡಿತ ಉತ್ತರಿಸುತ್ತೇನೆ. ಮೊದಲು ನಿಮ್ಮ ಅಭಿವೃದ್ಧಿ ಕೆಲಸ, ಸಾಧನೆಯನ್ನು ತಿಳಿಸಿ. ನನಗೆ ಗೊತ್ತಿರುವ ಹಾಗೆ ಮುಸ್ಲಿಂ ಹುಡುಗಿ ಹಿಂದೆ ಓಡಿ ಹೋದವರು ನೀವು ಎಂದು ವೈಯಕ್ತಿಕವಾಗಿ ಟೀಕಿಸಿದ್ದಾರೆ.


ತಮ್ಮ  ವೈಯಕ್ತಿಕ ವಿಚಾರದ ಬಗ್ಗೆ ಮಾತನಾಡಿದ್ದಕ್ಕೆ ದಿನೇಶ್ ಗುಂಡೂರಾವ್ ಅನಂತಕುಮಾರ್ ಹೆಗಡೆ ವಿರುದ್ಧ ಕಿಡಿಕಾರಿದ್ದಾರೆ. ರಾಜಕೀಯ ನಾಯಕರು ಈ ರೀತಿ ಟ್ವೀಟರ್ ನಲ್ಲಿ ಕಚ್ಚಾಡುತ್ತಿರುವುದನ್ನು ಕಂಡು ಸಾಮಾಜಿಕ ಜಾಲತಾಣದಲ್ಲಿ ಇದೀಗ ಪರ-ವಿರೋಧ ಚರ್ಚೆಗಳು ಆರಂಭವಾಗಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಋತುಚಕ್ರ ರಜೆ ತೀರ್ಪಿಗೆ ಕೆಲವೇ ಕ್ಷಣಗಳಲ್ಲಿ ಬದಲಾವಣೆ ಮಾಡಿದ ಹೈಕೋರ್ಟ್

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಿಎಂ ಕುರ್ಚಿ ಗುದ್ದಾಟದಲ್ಲಿ ರೈತರು ಸಂಕಷ್ಟದಲ್ಲಿ: ಬಿವೈ ವಿಜಯೇಂದ್ರ

ವಿಧಾನಸಭೆ ಒಳಗೆಯೂ ಕಾಂಗ್ರೆಸ್ ಹೋರಾಟ: ಆರ್.ಅಶೋಕ್

ರೈತರ ಆತ್ಮಹತ್ಯೆಯೇ ಕಾಂಗ್ರೆಸ್ ಸರಕಾರದ ಸಾಧನೆ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments