ಅವಳಿ ಜಲಾಶಯಗಳು ಪೂರ್ತಿ ಭರ್ತಿ ?

Webdunia
ಮಂಗಳವಾರ, 24 ಮೇ 2022 (09:05 IST)
ಚಾಮರಾಜನಗರ : ಜಿಲ್ಲೆಯಲ್ಲಿರುವ ಜಲಾಶಯಗಳು ಭರ್ತಿಯಾಗೋದೆ ತಮಿಳುನಾಡಿನಲ್ಲಿ ಉತ್ತಮ ಮಳೆಯಾದ್ರೆ.
 
ಅಸನಿ ಚಂಡಮಾರುತದ ಎಫೆಕ್ಟ್ನಿಂದಾಗಿ ತಮಿಳುನಾಡಿನ ದಿಂಬಂ, ತಾಳವಾಡಿಯಲ್ಲಿ ಉತ್ತಮ ಮಳೆ ಬಿದ್ದಿದೆ. ಈ ಹಿನ್ನೆಲೆ ಹಲವು ದಶಕದ ಬಳಿಕ ಅಕ್ಟೋಬರ್, ನವೆಂಬರ್ನಲ್ಲಿ ಭರ್ತಿಯಾಗ್ತಿದ್ದ ಅವಳಿ ಜಲಾಶಯಗಳು ಮೇ ನಲ್ಲೇ ಭರ್ತಿಯಾಗಿದೆ.

ಚಾಮರಾಜನಗರದ ಸುವರ್ಣಾವತಿ, ಚಿಕ್ಕಹೊಳೆ ಜಲಾಶಯ ಹಿಂದೆಲ್ಲಾ ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಡ್ಯಾಂಗಳು ಭರ್ತಿಯಾಗುತ್ತಿದ್ದವು. ಆದರೆ ಈ ವರ್ಷ ಮೇ ತಿಂಗಳಲ್ಲೇ ಡ್ಯಾಂ ಭರ್ತಿಯಾಗಿದ್ದು ಜಲ ವೈಭವ ವೀಕ್ಷಣೆಗೆ ಸಾರ್ವಜನಿಕರು ಬರುತ್ತಿದ್ದಾರೆ.

ಕರ್ನಾಟಕಕ್ಕೆ ಸೇರಿರುವ ಬೇಡಗುಳಿ, ತಮಿಳುನಾಡಿನ ದಿಂಬಂ, ಹಾಸನೂರು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಜಲಾಶಯಗಳಿಗೆ ಜೀವಕಳೆ ತಂದಿದೆ. ಸುವರ್ಣಾವತಿ ಜಲಾಶಯದ ನೀರು ಸಂಗ್ರಹಣದ ಗರಿಷ್ಠ ಮಟ್ಟ 2,455 ಅಡಿ. ಎರಡು ಅಡಿ ಬಾಕಿಯಿದ್ದು, ಬಹುತೇಕ ಭರ್ತಿ ಹಂತದಲ್ಲಿದೆ.

ಅದೇ ರೀತಿ ಚಿಕ್ಕಹೊಳೆ 2,449 ಅಡಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದ್ದು ಭರ್ತಿಯಾಗಿದೆ. ಸುವರ್ಣಾವತಿ ಜಲಾಶಯ 6,400 ಎಕರೆ ಹಾಗೂ ಚಿಕ್ಕಹೊಳೆ 4,000 ಎಕರೆ ಅಚ್ಚುಕಟ್ಟು ಪ್ರದೇಶ ಹೊಂದಿದೆ. ಅಸನಿ ಚಂಡಮಾರುತದಿಂದ ಹವಾಮಾನದಲ್ಲಿ ಉಂಟಾದ ಬದಲಾವಣೆಯಿಂದ ತಮಿಳುನಾಡು ಮತ್ತು ಕರ್ನಾಟಕದಲ್ಲಿ ಮಳೆ ಸುರಿದಿದ್ದು, ಜಲಾಶಯಗಳು ನಳನಳಿಸುತ್ತಿವೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ವಾರಂತ್ಯಕ್ಕೆ ಭಾರೀ ಮಳೆ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮುಂದಿನ ಸುದ್ದಿ
Show comments