ಕೋಗಿಲು ಲೇಔಟ್ ನಿವಾಸಿಗಳ ಬಗ್ಗೆ ಶಾಕಿಂಗ್ ಸತ್ಯ ರಿವೀಲ್

Krishnaveni K
ಮಂಗಳವಾರ, 27 ಜನವರಿ 2026 (10:12 IST)
ಬೆಂಗಳೂರು: ಕೆಲವು ದಿನಗಳ ಹಿಂದೆ ಕೇರಳ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ ಬೆನ್ನಲ್ಲೇ ಕೋಗಿಲು ಲೇಔಟ್ ನ ಅಕ್ರಮ ವಸತಿ ನಿರ್ಮಾಣ ತೆರವು ಕಾರ್ಯ ಸದ್ದು ಮಾಡಿತ್ತು. ಆದರೆ ಈಗ ನಿವಾಸಿಗಳ ಬಗ್ಗೆ ಶಾಕಿಂಗ್ ಸತ್ಯ ಹೊರಬಿದ್ದಿದೆ.

ಕೇರಳ ಸಿಎಂ ಬೆಂಗಳೂರಿನ ಕೋಗಿಲು ಲೇಔಟ್ ನಿವಾಸಿಗಳನ್ನು ತೆರವುಗೊಳಿಸಿದ್ದಕ್ಕೆ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ, ಬುಲ್ಡೋಜರ್ ಸಂಸ್ಕೃತಿ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು. ಇದರ ಬೆನ್ನಲ್ಲೇ ಕರ್ನಾಟಕ ಇಲ್ಲಿನ ನಿವಾಸಿಗಳಿಗೆ ವಿರೋಧದ ನಡುವೆಯೂ ಪುನರ್ವಸತಿ ಕಲ್ಪಿಸಲು ಮುಂದಾಗಿದೆ.

ಆದರೆ ಈಗ ಕೋಗಿಲು ನಿವಾಸಿಗಳ ಬಗ್ಗೆ ಶಾಕಿಂಗ್ ಸತ್ಯ ಹೊರಬೀಳುತ್ತಿದೆ. ಇಲ್ಲಿನ ನಿವಾಸಿಗಳು ಬಡವರು ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಈಗ ಕೋಗಿಲು ಲೇಔಟ್ ನ ಫಕೀರ್ ಕಾಲೊನಿ ಮತ್ತು ವಸೀಂ ಲೇಔಟ್ ನಲ್ಲಿ ಸರ್ಕಾರೀ ಜಮೀನು ಒತ್ತುವರಿ ಮಾಡಿದವರಿಂದ ಲಕ್ಷ ಲಕ್ಷ ಹಣ ಪಡೆಯಲಾಗಿತ್ತು. ಶೆಡ್ ನಿರ್ಮಾಣ ಮಾಡಿಕೊಳ್ಳಲು ವಿಜಯ್ ಮತ್ತು ರಾಬಿನ್ ಎಂಬವರು ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರು ಎಂಬ ವಿಚಾರ ಪೊಲೀಸ್ ತನಿಖೆಯಲ್ಲಿ ಹೊರಬಿದ್ದಿದೆ. ಒಂದು ವೇಳೆ ಅವರಿಗೆ ಲಕ್ಷಾಂತರ ರೂಪಾಯಿ ಕೊಡಲು ಸಾಧ್ಯವಾಗಿದೆ ಎಂದರೆ ಅವರು ಬಡವರು ಹೇಗಾಗುತ್ತಾರೆ ಎಂಬ ಪ್ರಶ್ನೆ ಮೂಡಿದೆ. ಇಲ್ಲಿ ತೆರವುಗೊಳಿಸಿದ್ದು ಬಡವರ ಮನೆ ಎನ್ನಲಾಗಿತ್ತು. ಆದರೆ ಇವರೆಲ್ಲಾ ಬಡವರಲ್ಲ ಎಂಬ ಅಂಶ ಹೊರಬಿದ್ದಿದೆ. ಹಾಗಾಗಿ ಇವರಿಗೆ ಪುನರ್ವಸತಿ ಕಲ್ಪಿಸಬೇಕೇ ಎಂಬ ಬಗ್ಗೆ ಈಗ ಚರ್ಚೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments