Webdunia - Bharat's app for daily news and videos

Install App

ಶಾಂತಿಭಂಗ ಮಾಡುತ್ತಿದ್ದ ಇಬ್ಬರು ಆರೋಪಿಗಳ ಗಡಿಪಾರು

Webdunia
ಗುರುವಾರ, 21 ಸೆಪ್ಟಂಬರ್ 2017 (18:41 IST)
ಹುಬ್ಬಳ್ಳಿ: ಸಮಾಜದ ಸ್ವಾಸ್ಥ್ಯ, ಸಮಾಜ ಘಾತಕ ಚಟುವಟಿಕೆಯಲ್ಲಿ ಭಾಗಿಯಾಗಿ ಶಾಂತಿ‌ ಕದಡುತ್ತಿದ್ದ ಆರೋಪದ ಮೇಲೆ ಇಬ್ಬರು ಕೊಲೆ ಆರೋಪಿಗಳನ್ನು ಗಡಿಪಾರು ಮಾಡಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎಂ.ಎನ್.ನಾಗರಾಜ್  ಆದೇಶ ಹೊರಡಿಸಿದ್ದಾರೆ.

ಮುಕ್ತುಂ ಸೊಗಲದ ಹಾಗೂ ಇರ್ಫಾನ್ ಹಂಚಿನಾಳ ಗಡಿಪಾರಾದ ಆರೋಪಿಗಳು. ಇವರು ಸಮಾಜದ ಶಾಂತಿಭಂಗವನ್ನುಂಟು ಮಾಡುವ ಕೆಲಸ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಗಡಿಪಾರಿಗೆ ಆದೇಶ ನೀಡಲಾಗಿದೆ. ಮುಕ್ತುಂ ಸೊಗಲದ್ ಕೊಲೆ ಹಾಗೂ ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಎದುರಿಸುತ್ತಿದ್ದು, ಸೆ. 14ರಂದು ಜಾಮೀನಿನ ಮೇಲೆ ಹೊರಬಂದಿದ್ದ.‌ ಧಾರವಾಡ ಜೈಲಿನಿಂದ ಹೊರಬರುತ್ತಿದ್ದಂತೆ ಬೆಂಬಲಿಗರೊಂದಿಗೆ ಜೈಲಿನಿಂದ ಮನೆಯವರೆಗೂ ತೆರೆದ ಕಾರಿನಲ್ಲಿ ರೋಡ್ ಶೋ ಮಾಡಿದ್ದ. ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು.

ಇನ್ನು ಇರ್ಫಾನ್ ಧಾರವಾಡದಲ್ಲಿ ನಡೆದಿದ್ದ ಎರಡು ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿದ್ದು, ಮತ್ತೆ ಹಲವು ಶಾಂತಿಭಂಗ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಆರೋಪವಿದೆ.‌ ಹೀಗಾಗಿ ಈತನನ್ನು ಗಡಿಪಾರು  ಮಾಡಿ ಆದೇಶ ನೀಡಿದ್ದಾರೆ. ಪೊಲೀಸ್ ಕಮೀಷನರ್ ಈ ನಡೆಯನ್ನು ನಗರದ ಜನತೆಯಿಂದ ಪ್ರಶಂಸೆ ವ್ಯಕ್ತವಾಗಿದೆ. ಕಾನೂನು ಬಾಹಿರ ಚಟುಚಟಿಕೆಯಲ್ಲಿ ಭಾಗಿಯಾಗಿರುವವರಿಗೆ ಇದೊಂದು ಎಚ್ಚರಿಕೆ ಗಂಟೆಯಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments