Webdunia - Bharat's app for daily news and videos

Install App

ಎರಡು ಅಪರಾಧ ಬಯಲು! ಮೃತನ ಮಗಳು ಪ್ರಗ್ನೆಂಟ್?

Webdunia
ಶುಕ್ರವಾರ, 10 ಡಿಸೆಂಬರ್ 2021 (13:53 IST)
ಬೆಂಗಳೂರು : ಕೃಷಿ ವಿಶ್ವವಿದ್ಯಾಲಯ ಗಾಂಧಿ ಕೃಷಿ ವಿಜ್ಞಾನ ಕೇಂದ್ರದ (ಜಿಕೆವಿಕೆ) ಭದ್ರತಾ ಸಿಬ್ಬಂದಿ ದೀಪಕ್ ಕುಮಾರ್(46)ಕೊಲೆ ಪ್ರಕರಣಕ್ಕೆ ಸಂಬಂಧಿ ಮತ್ತೊಂದು ಸ್ಫೋಟಕ ಮಾಹಿತಿ ಬಯಲಾಗಿದೆ.

ಕೊಲೆ ಪ್ರಕರಣದ ತನಿಖೆ ವೇಳೆ ಪೊಲೀಸರೇ ಶಾಕ್ ಆಗಿದ್ದಾರೆ. ಒಂದು ಪ್ರಕರಣದ ಬೆನ್ನು ಬಿದ್ದ ಪೊಲೀಸರಿಗೆ ಇನ್ನೆರಡು ಅಪರಾಧ ಕೃತ್ಯ ಬಯಲಾಗಿದೆ.
ಯಲಹಂಕ ನ್ಯೂಟೌನ್ನ ಅಟ್ಟೂರು ಕೊಲೆ ಕೇಸ್ಗೆ ಟ್ವಿಸ್ಟ್ ಸಿಕ್ಕಿದೆ. ಕಳೆದ ತಿಂಗಳ ನವೆಂಬರ್ 22 ರಂದು ಜಿಕೆವಿಕೆ ಸೆಕ್ಯೂರಿಟಿ ಗಾರ್ಡ್ ದೀಪಕ್ ಕುಮಾರ್ ಸಿಂಗ್ ಕೊಲೆ ನಡೆದಿತ್ತು. ಕೊಲೆಯ ಹಿಂದಿನ ರಹಸ್ಯ ಭೇದಿಸಲು ಮುಂದಾದ ಪೊಲೀಸರಿಗೆ ಕೊಲೆಯ ಅಸಲಿ ಸತ್ಯ ಗೊತ್ತಾಗಿದೆ. ಒಟ್ಟು ನಾಲ್ವರು ದೀಪಕ್ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದರು. ಈ ಕೇಸ್ ಸಂಬಂಧ ಪೊಲೀಸರು ಮೃತ ದೀಪಕ್ ಮಗಳ ಬಳಿ ಮಾಹಿತಿ ಪಡೆಯುವ ವೇಳೆ ಕೊಲೆಯ ಸತ್ಯ ಸಂಗತಿ ಬಯಲಾಗಿದೆ.
ಕೊಲೆ ಕೇಸ್ಗೆ ಸಂಬಂಧಿಸಿ ಪೊಲೀಸರು ಮಾಹಿತಿ ಕೇಳುವಾಗ ನಾಲ್ವರು ಟೂಲ್ಸ್ ಸಮೇತ ಬಂದು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆಂದ ಮಗಳು ಉತ್ತರಿಸಿದ್ದಳು. ಈ ವೇಳೆ ಅನುಮಾನಗೊಂಡ ಪೊಲೀಸರು ಟೆಕ್ನಿಕಲ್ ವರ್ಡ್ ಬಳಿಸಿದ ಮಗಳ ಬಳಿ ಕ್ರಾಸ್ ಕ್ವೆಷನಿಂಗ್ ಮಾಡಿದಾಗ ಹತ್ಯೆಯ ರಹಸ್ಯ ಬಯಲಾಗಿದೆ. ತನ್ನ ಕಾಲೇಜು ಗೆಳೆಯರ ಜೊತೆ ಗೂಡಿ ಕೊಲೆ ಕೃತ್ಯ ನಡೆಸಿರುವುದು ಬೆಳಕಿಗೆ ಬಂದಿದೆ.
ಸದ್ಯ ಪೊಲೀಸರ ವಿಚಾರಣೆ ವೇಳೆ ತಂದೆಯ ಕಿರುಕುಳದ ಬಗ್ಗೆ ಎಳೆಎಳೆಯಾಗಿ ಮಗಳು ಮಾಹಿತಿ ಬಿಚ್ಚಿಟ್ಟಿದ್ದಾಳೆ. ತಂದೆಯ ನಿರಂತರ ಕಿರುಕುಳಕ್ಕೆ ಬೇಸತ್ತು ಸ್ನೇಹಿತರ ಜೊತೆಗೂಡಿ ಹತ್ಯೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾಳೆ. ಹೀಗಾಗಿ ಮಗಳ ಮೇಲೆ ತನ್ನ ಕಾಮಕೃತ್ಯ ತೋರಿಸಿಕೊಂಡಿದ್ದ ತಂದೆ ದೀಪಕ್ ಕುಮಾರ್ ಸಿಂಗ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅತ್ಯಾಚಾರ, ಮಾರಣಾಂತಿಕ ಹಲ್ಲೆ, ಪೊಕ್ಸೊ ಆ್ಯಕ್ಟ್ ಅಡಿ ಕೊಲೆಯಾದ ನಂತರ ಮೃತನ ವಿರುದ್ಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments