ಹೆಣ್ಣು ಮಕ್ಕಳಿಬ್ಬರಿಗೆ ವಿಷ ಕುಡಿಸಿ ಕೊಲೆ‌ ಪ್ರಯತ್ನ

Webdunia
ಸೋಮವಾರ, 7 ಆಗಸ್ಟ್ 2023 (21:00 IST)
ಹೆಣ್ಣು ಮಕ್ಕಳಿಬ್ಬರಿಗೆ ವಿಷ ಕುಡಿಸಿ ಕೊಲೆ‌ಪ್ರಯತ್ನಕ್ಕೆ ಯತ್ನಿಸಿರೋ  ಘಟನೆ ದೇವನಹಳ್ಳಿಯಲ್ಲಿ ನಡೆದಿದೆ. ಕಳೆದ ಮಂಗಳವಾರ ದೇವನಹಳ್ಳಿಯ ದೊಡ್ಡಸಣ್ಣೆ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಗ್ರಾಮದ ವಾಸಿಯಾಗಿರೋ ಶಿಲ್ಪ ಮತ್ತು ಅಶೋಕ ಕೆಲಸಕ್ಕೆ ಹೋಗಿದ್ದಾಗ ಮುಂಜಾನೆ ಆರು ಗಂಟೆಗೆ ಮನೆಗೆ ಮುಸುಕು ಧರಿಸಿ ಬಂದಿದ್ದ ಅನಾಮಿಕ‌ ವ್ಯಕ್ತಿ 13ವರ್ಷದ ಪಲ್ಲವಿಗೆ ಬಲವಂತವಾಗಿ ವಿಷ ಕುಡಿಸಿದ್ದಾನೆ. ಮಗಳನ್ನು ಆಸ್ಪತ್ರೆಗೆ ಸೇರಿಸಿ ಕುಟುಂಬ ನೋವಿನಲ್ಲಿ ಇರುವಾಗ್ಲೆ ಎರಡು ನಂತರ ಅಂದ್ರೆ ಗುರುವಾರ ಮತ್ತೊಬ್ಬ ಮಗಳಾದ 15ವರ್ಷದ ಅನುಷಾಗೆ ಮತ್ತೆ ಅದೇ ಮುಸುಕುದಾರಿ ಬಂದು ವಿಷ ಕುಡಿಸಿದ್ದಾನೆ.‌ ಇದಕ್ಕೆ ಅನುಷ ಪ್ರತಿರೋಧ ವ್ಯಕ್ತಪಡಿಸಿದಾಗ ಎಡಗೈಗೆ ಚಾಕು ಇರಿದು ವಿಷ ಕುಡಿಸಲಾಗಿದೆ ಎಂದು ದೂರು ದಾಖಲಿಸಲಾಗಿದೆ. ಆದ್ರೆ ಪ್ರಕರಣದಲ್ಲಿ ಸಾಕಷ್ಟು ಅನುಮಾನಗಳೂ ಮೂಡಿದೆ. ಯಾಕಂದ್ರೆ ಎರಡನೇ ಬಾರಿ ಅನುಷಾಳಿಗೆ ವಿಷ ಕುಡಿಸುವಾಗ ಮೊದಲು ನೀಡಿದ ಎಫ್ ಐ ಆರ್ ವಾಪಸ್ ಪಡೆಯುವಂತೆ ಬೆದರಿಸಿ ವಿಷ ಕುಡಿಸಿರೋದಾಗಿ ಆರೋಪಿಸಲಾಗಿದೆ‌. ಇನ್ನೂ     ಅನುಷ ಮತ್ತು ಪಲ್ಲವಿ ಇಬ್ರು ದೊಡ್ಡಪ್ಪ ಚಿಕ್ಕಪ್ಪನ ಮಕ್ಕಳಾಗಿದ್ದು ಒಂದೇ ಗ್ರಾಮದಲ್ಲಿ ವಾಸ ಮಾಡ್ತಿದ್ರು. ಘಟನೆ ಕುರಿತು ದೇವನಹಳ್ಳಿ ಠಾಣೆಯಲ್ಲಿ ಪ್ರತ್ಯೇಕ ಎಫ್ ಐ ಆರ್ ದಾಖಲಾಗಿದ್ದು ಆರೋಪಿಗಳ ಪತ್ತೆಗೆ ಪೊಲೀಸ್ರು ಬಲೆ ಬೀಸಿದ್ದಾರೆ‌.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments