Select Your Language

Notifications

webdunia
webdunia
webdunia
webdunia

ಕಲಬುರ್ಗಿಯಲ್ಲಿ ಭಾರೀ ಮಳೆ: ಸಿಡಿಲು ಬಡಿದು ಇಬ್ಬರು ಸಾವು

ಕಲಬುರ್ಗಿಯಲ್ಲಿ ಭಾರೀ ಮಳೆ: ಸಿಡಿಲು ಬಡಿದು ಇಬ್ಬರು ಸಾವು
ಕಲಬುರ್ಗಿ , ಶುಕ್ರವಾರ, 29 ಸೆಪ್ಟಂಬರ್ 2017 (20:16 IST)
ಕಲಬುರ್ಗಿ: ಜಿಲ್ಲೆಯಾದ್ಯಂತ ಕಳೆದ ಮಧ್ಯಾಹ್ನದಿಂದ ನಿರಂತರವಾಗಿ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುತ್ತಿದೆ. ಚಿತ್ತಾಪುರ ತಾಲೂಕಿನ ತೊನಸನಳ್ಳಿ(ಟಿ) ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.
ಗ್ರಾಮದ ಬಸಮ್ಮ ಸಂಗಾವಿ(45) ಹಾಗೂ ಅಂಬಿಕಾ ಸರಡಗಿ(43) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಾಯಗೊಂಡಿದ್ದು, ಈ ಪೈಕಿ ಆಂಜನಮ್ಮ ಗಂಭೀರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ.

ಸುಮಾರು ಏಳರಿಂದ ಎಂಟು ಜನರಿದ್ದ ತಂಡ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಮಳೆ ಸುರಿದಿದೆ. ಮಳೆಯಿಂದ ರಕ್ಷಿಣೆಗಾಗಿ ಎಲ್ಲರೂ ಎತ್ತಿನ ಬಂಡಿಯೊಂದರ ಕೆಳಗೆ ಕುಳಿತಿರುವಾಗ ಸಿಡಿಲು ಬಡಿದು ಅವಘಡ ಸಂಭವಿಸಿದೆ ಎನ್ನಲಾಗಿದೆ.

ಸ್ಥಳಕ್ಕೆ ಮಾಡಬೂಳ ಠಾಣೆ ಪೊಲೀಸರು ಭೇಟಿ ನೀಡಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಿಎಸ್‌ಐಯೊಂದಿಗೆ ಪತ್ನಿಯ ಅನೈತಿಕ ಸಂಬಂಧ: ರಾಸಲೀಲೆ ವಿಡಿಯೋ ಪೋಸ್ಟ್ ಮಾಡಿದ ಪತಿ