Webdunia - Bharat's app for daily news and videos

Install App

ಇಬ್ಬರು ನಕಲಿ ಐಎಎಸ್ ಅಧಿಕಾರಿಗಳ ಬಂಧನ: ವಿಚಾರಣೆ

Webdunia
ಗುರುವಾರ, 8 ಅಕ್ಟೋಬರ್ 2015 (18:20 IST)
ಐಎಎಸ್ ಅಧಿಕಾರಿಗಳೆಂದು ಹೇಳಿಕೊಂಡು ಸಾರ್ವಜನಿಕರಿಗೆ ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ನಗರದ ಉಪ್ಪಾರ ಪೇಟೆ ಪೊಲೀಸರು ನಿನ್ನೆ ಸಂಜೆ ಬಂಧಿಸಿದ್ದು, ಈ ವಿಷಯ ಪ್ರಸ್ತುತ ಬೆಳಕಿಗೆ ಬಂದಿದೆ. 
 
ಬಂಧಿತ ಆರೋಪಿಗಳನ್ನು ಪ್ರಸಾದ್(30) ಮತ್ತು ಮೋಹನ್(32) ಎಂದು ಹೇಳಲಾಗಿದ್ದು, ಎಲ್ಲಿಯವರು, ಯಾರಿಗೆ, ಎಷ್ಟು ವಂಚನೆ ಮಾಡಿದ್ದಾರೆ ಎಂಬ ಬಗ್ಗೆ ಪೊಲೀಸರು ಇನ್ನೂ ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. 
 
ರಸ್ತೆಯಲ್ಲಿ ಸಂಶಯಾಸ್ಪದವಾಗಿ ಕಂಡು ಬಂದ ಕಾರನ್ನು ಕಂಡ ನಗರದ ಪೊಲೀಸರು, ಆರೋಪಿಗಳು ಹಾಗೂ ಅವರು ಬಳಸುತ್ತಿದ್ದ ಇನ್ನೋವಾ ಕಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಕಾರಿನಲ್ಲಿ ವಿಧಾನಸೌಧಕ್ಕೆ ಸಂಬಂಧಿಸಿದ ಹಲವು ಸರ್ಕಾರಿ ದಾಖಲೆಗಳು ಪತ್ತೆಯಾಗಿವೆ. ಅಲ್ಲದೆ ಸರ್ಕಾರದ ಲಾಂಛನವನ್ನು ತಮ್ಮ ಕಾರಿನ ಮೇಲೆ ಅಳವಡಿಸಿಕೊಂಡು ಕಾರಿನ ಮೇಲೆ ಹಿಂದುಳಿದ ಅಲ್ಪಸಂಖ್ಯಾತ ಸೇವಾ ಸಂಸ್ಥೆಯ  ಉಪಾಧ್ಯಕ್ಷರು ಎಂದೂ ಕೂಡ ಹಾಕಿಕೊಂಡಿದ್ದಾರೆ ಎಂದು ತಿಳಿಸಿದರು. 
 
ಬಳಿಕ, ನಾನು ಐಎಎಸ್ ಅಧಿಕಾರಿಯಾಗಿದ್ದು, ನಿಮಗೆ ಸರ್ಕಾರಿ ಕೆಲಸ ಕೊಡಿಸುವ ಆಮಿಷವೊಡ್ಡಿ ಕೆಲ ಸರ್ಕಾರಿ ದಾಖಲೆಗಳನ್ನು ಬಳಸಿಕೊಳ್ಳುತ್ತಿದ್ದರು. ಅಲ್ಲದೆ ಆರೋಪಿಗಳಲ್ಲಿ ಪ್ರಮುಖವಾಗಿ ಪ್ರಸಾದ್ ಪಾತ್ರವಿದ್ದು, ಪ್ರಸಾದ್‌ಗೆ ಮೋಹನ್ ಸಹಕರಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಕೂಡ ವಶಕ್ಕೆ ಪಡೆದಿರುವುದಾಗಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments