ಹೊಂಡದ ಗಲಾಟೆಗೆ ಇಬ್ಬರ ಕೊಲೆ!

Webdunia
ಭಾನುವಾರ, 27 ಜನವರಿ 2019 (15:35 IST)
ಸಂಡಾಸು ಹೊಂಡಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ನಡೆದಿದೆ.

ಕೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೋಟ ನಿವಾಸಿಗಳಾದ ಭರತ್ ಮತ್ತು ಯತೀಶ್ ಹತ್ಯೆಗೊಳಗಾದವರಾಗಿದ್ದಾರೆ. ಮೃತ ಯತೀಶ್ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಕೇಶ್ ಮಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡಿದ್ದರು.

ಭರತ್ ಕೋಟದಲ್ಲಿ ಆಟೋ ಚಾಲಕನಾಗಿದ್ದರು. ಅವರ ಸ್ನೇಹಿತ ಲೋಹಿತ್ ಮನೆಯಲ್ಲಿನ ಸಂಡಾಸು ಹೊಂಡದ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಭರತ್ ಮತ್ತು ಯತೀಶ್ ಸಹಕಾರ ಮಾಡಿದ್ದೇ ಕೊಲೆಗೆ ಪ್ರೇರಣೆ ಎನ್ನಲಾಗಿದ್ದು, ಹಿನ್ನೆಲೆಯಲ್ಲಿ ರೌಡಿಶೀಟರ್ ಹರೀಶ್ ರೆಡ್ಡಿ ಸಹಚರರು ಕೋಟದ ರಾಜಲಕ್ಷ್ಮಿ ಸಭಾಂಗಣದ ಮುಂದೆ ನಿನ್ನೆ ರಾತ್ರಿ 10.30 ಸುಮಾರಿಗೆ ಕೊಲೆ ಮಾಡಿದ್ದಾರೆ ಎಂದು ದೂರಲಾಗಿದೆ.

ರಕ್ತದ ಮಡುವಿನಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎನ್ನಲಾಗಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೀತಿಯ ವಿದ್ಯಾರ್ಥಿಗಳಿಗೆ ಅಂತಿಮ ವಿದಾಯ ಹೇಳಿ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಶಿಕ್ಷಕಿ

ನಿಮ್ಮ ಮತವನ್ನು ನಮಗೆ ನೀಡಿ, ನಾವು ನಿಮ್ಮನ್ನು ಟಿಎಂಸಿಯಿಂದ ಮುಕ್ತಗೊಳಿಸುತ್ತೇವೆ: ಪ್ರಧಾನಿ ನರೇಂದ್ರ ಮೋದಿ

ಯಾವ ಸಂದರ್ಭದಲ್ಲಿ ಏನ್ ಆಗಬೇಕು ಅದು ನಡೆಯುತ್ತದೆ: ಡಿಕೆ ಶಿವಕುಮಾರ್ ಹೀಗೇ ಹೇಳಿದ್ಯಾಕೆ

ಟೇಕಾಫ್ ವೇಳೆ ಸ್ವಿಸ್ ವಿಮಾನದಲ್ಲಿ ವೈಫಲ್ಯ: 6ಮಂದಿಗೆ ಗಾಯ

ಬಿಸಿಲ ಧಗೆಗೆ ಸುಸ್ತಾಗಿದ್ದ ಕರಾವಳಿ ಮಂದಿ ಈ ದಿನದಂದು ಮಳೆ ನಿರೀಕ್ಷಿಸಬಹುದು

ಮುಂದಿನ ಸುದ್ದಿ
Show comments