ಪೊಲೀಸರ ಮೇಲೆ ಹಲ್ಲೆ ನಡೆಸಿದ ಇಬ್ಬರ ಬಂಧನ

Webdunia
ಗುರುವಾರ, 15 ಜುಲೈ 2021 (17:13 IST)
ಮಂಗಳೂರಿನ ಉರ್ವ ಪೊಲೀಸ್ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆ ನಡೆಸಿದ ಆರೋಪದಲ್ಲಿ ಇಬ್ಬರನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದು, ಬಂಧಿತರನ್ನು ನೊವೆಲ್ ಸಿಕ್ವೇರಾ, ಜಾನ್ ಸಿಕ್ವೇರಾ ಎಂದು ಗುರುತಿಸಲಾಗಿದೆ.
ಹೆಡ್‌ಕಾನ್‌ಸ್ಟೇಬಲ್ ನಾರಾಯಣ, ಕಾನ್‌ಸ್ಟೇಬಲ್ ಪೂಜಾ ಹಿರೇಮಠ ಹಲ್ಲೆಗೊಳಗಾದವರು. ತಳ್ಳಾಟದಲ್ಲಿ ಗಾಯಗೊಂಡ ಇಬ್ಬರೂ ಪೊಲೀಸರನ್ನು ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಮೇ ತಿಂಗಳಲ್ಲಿ ಉರ್ವ ಠಾಣಾ ವ್ಯಾಪ್ತಿಯಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುವವರು ನಿರ್ವಹಣಾ ಶುಲ್ಕ ಹಾಗೂ ನೀರು ಸಂಪರ್ಕ ಕೊಡುವುದರ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಎರಡು ಪ್ರಕರಣಗಳನ್ನು ದಾಖಲಿಸಲಾಗಿತ್ತು.
17 ವರ್ಷದ ಬಾಲಕಿಗೆ ಹಲ್ಲೆ ನಡೆಸಿರುವುದು ಹಾಗೂ ಪೊಕ್ಸೊ ಕೇಸು ದಾಖಲಾಗಿತ್ತು. ಮತ್ತೊಂದು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಮಾಹಿತಿ ನೀಡಿದರು. ಈ ಎರಡೂ ಪ್ರಕರಣದಲ್ಲಿ ಅಪಾರ್ಟ್‌ಮೆಂಟ್‌ನ ಅಸೋಸಿಯೇಶನ್‌ನವರು ಮಾತನಾಡಿಕೊಂಡು ಡಿಸಿಪಿ ಕಚೇರಿಗೆ ಆಗಮಿಸಿದ್ದಾರೆ. ಪ್ರಕರಣವನ್ನು ಹಿಂಪಡೆಯಲು ಅವಕಾಶ ನೀಡಬೇಕೆಂದು ಕೇಳಿಕೊಂಡಿದ್ದಾರೆ.
ತನಿಖಾಧಿಕಾರಿಯಲ್ಲಿ ಹೇಳಿಕೆ ಕೊಡಲು ಡಿಸಿಪಿ ತಿಳಿಸಿ ಕಳುಹಿಸಿದ್ದಾರೆ. ನಂತರ ಅಪಾರ್ಟ್‌ಮೆಂಟ್ ಅಸೋಸಿಯೇಶನ್‌ನವರು ಠಾಣೆಗೆ ಆಗಮಿಸಿದ್ದಾರೆ. ಇನ್‌ಸ್ಪೆಕ್ಟರ್ ಕೊಠಡಿಯಲ್ಲಿ ಈ ಸಂಬಂಧ ಮಾತುಕತೆ ನಡೆಸುತ್ತಿದ್ದಾಗ ಆರೋಪಿಗಳು ಮೊಬೈಲ್‌ನಲ್ಲಿ ಶೂಟಿಂಗ್ ಮಾಡಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ ಅನುಚಿತವಾಗಿ ನಡೆದುಕೊಂಡಿದ್ದಾರೆ. ಮೊಬೈಲ್ ಎಳೆದು ಕೊಳ್ಳುವಾಗ ತಳ್ಳಾಟವಾಗಿ ಪೊಲೀಸರು ಗಾಯಗೊಂಡಿದ್ದಾರೆ ಎಂದು ವಿವರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ತನ್ನ ಉಪವಾಸ ಸತ್ಯಾಗ್ರಹ ಕೊನೆಗೊಳಿಸಲು ಹೊಸ ಡಿಮ್ಯಾಂಡ್ ಮುಂದಿಟ್ಟ ಸೋನಮ್ ವಾಂಗ್ಚುಕ್

ಮುಂದಿನ ಸುದ್ದಿ
Show comments