Select Your Language

Notifications

webdunia
webdunia
webdunia
webdunia

ರಾಜ್ಯಾದ್ಯಂತ ಇನ್ನೆರಡು ದಿನ ಮಳೆ ಸಾಧ್ಯತೆ

rain karnataka bengaluru ಬೆಂಗಳೂರು ಮಳೆ ಕರ್ನಾಟಕ ಮುಂಗಾರು
bengaluru , ಭಾನುವಾರ, 26 ಜೂನ್ 2022 (16:45 IST)
ನಿರೀಕ್ಷೆಯಂತೆ ನೈಋತ್ಯ ಮುಂಗಾರು ರಾಜ್ಯವನ್ನು ಪ್ರವೇಶಿಸಿದ್ದು, ಉತ್ತಮ ಮಳೆಯ ಭರವಸೆ ಮೂಡಿಸಿದೆ. ನಾಳೆಯಿಂದ ಎರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗಲಿದ್ದು ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷಿಸಲಾಗಿದೆ.
ರಾಜ್ಯಾದ್ಯಂತ ಭಾರೀ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರೇಂಜ್‌ ಅಲರ್ಟ್‌ ಘೋಷಿಸಲಾಗಿದೆ.  
ಉತ್ತರ ಕರ್ನಾಟಕದ ಭಾಗದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ  ಇದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬೆಳಗಾವಿ ಬಳಿ ಸಂಭವಿಸಿದ ರಸ್ತೆ ಅಪಘಾತ :ಮೃತರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ