Publish Date: Sat, 29 Jun 2019 (11:47 IST)
Updated Date: Sat, 29 Jun 2019 (16:16 IST)
ರಾಯಚೂರು : ಸಿಎಂ ಕುಮಾರಸ್ವಾಮಿ ಕರೇಗುಡ್ಡ ಗ್ರಾಮ ವಾಸ್ತವ್ಯದ ವೇಳೆ ಸರಿಯಾದ ಭದ್ರತೆ ನೀಡಿಲ್ಲ ಎಂದು ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡುವಂತೆ ಆದೇಶಿಸಲಾಗಿದೆ.
ರಾಯಚೂರಿನ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್ಐ ನಿಂಗಪ್ಪ ಹಾಗೂ ಯರಗೇರಾ ಇನ್ಸ್ಪೆಕ್ಟರ್ ದತ್ತಾತ್ರೇಯ ಅಮಾನತ್ತಿಗೆ ಒಳಗಾಗಿರುವ ಅಧಿಕಾರಿಗಳು. ಸಿಎಂ ರಾಯಚೂರಿನ ಕರೇಗುಡ್ಡ ಗ್ರಾಮದಲ್ಲಿ ವಾಸ್ತವ್ಯ ಹೂಡಿದ ವೇಳೆ ವೈಟಿಪಿಎಸ್ ಗುತ್ತಿಗೆ ಕಾರ್ಮಿಕರು ಮರು ನೇಮಕಕ್ಕೆ ಒತ್ತಾಯಿಸಿ ಸಿಎಂ ತೆರಳುತ್ತಿದ್ದ ವಾಹನಕ್ಕೆ ಅಡ್ಡಗಟ್ಟಿ ಪ್ರತಿಭಟನೆ ನಡೆಸಿ ಗ್ರಾಮ ವಾಸ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು.
ಈ ಘಟನೆಗೆ ಭದ್ರತಾ ವೈಫಲ್ಯವೇ ಕಾರಣ ಎಂದು ಪರಿಗಣಿಸಿ ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.