Webdunia - Bharat's app for daily news and videos

Install App

ಸಿಎಂ ಗ್ರಾಮ ವಾಸ್ತವ್ಯದ ಭದ್ರತಾ ವೈಫಲ್ಯದ ಹಿನ್ನೆಲೆ; ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತಿಗೆ ಆದೇಶ

Webdunia
ಶನಿವಾರ, 29 ಜೂನ್ 2019 (11:47 IST)
ರಾಯಚೂರು : ಸಿಎಂ ಕುಮಾರಸ್ವಾಮಿ ಕರೇಗುಡ್ಡ ಗ್ರಾಮ ವಾಸ್ತವ್ಯದ ವೇಳೆ ಸರಿಯಾದ ಭದ್ರತೆ ನೀಡಿಲ್ಲ ಎಂದು ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡುವಂತೆ ಆದೇಶಿಸಲಾಗಿದೆ.




ರಾಯಚೂರಿನ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ನಿಂಗಪ್ಪ ಹಾಗೂ ಯರಗೇರಾ ಇನ್ಸ್​ಪೆಕ್ಟರ್​ ದತ್ತಾತ್ರೇಯ ಅಮಾನತ್ತಿಗೆ ಒಳಗಾಗಿರುವ ಅಧಿಕಾರಿಗಳು. ಸಿಎಂ ರಾಯಚೂರಿನ ಕರೇಗುಡ್ಡ ಗ್ರಾಮದಲ್ಲಿ  ವಾಸ್ತವ್ಯ ಹೂಡಿದ ವೇಳೆ ವೈಟಿಪಿಎಸ್ ಗುತ್ತಿಗೆ ಕಾರ್ಮಿಕರು ಮರು ನೇಮಕಕ್ಕೆ ಒತ್ತಾಯಿಸಿ ಸಿಎಂ ತೆರಳುತ್ತಿದ್ದ ವಾಹನಕ್ಕೆ ಅಡ್ಡಗಟ್ಟಿ ಪ್ರತಿಭಟನೆ ನಡೆಸಿ ಗ್ರಾಮ ವಾಸ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದರು.


ಈ ಘಟನೆಗೆ ಭದ್ರತಾ ವೈಫಲ್ಯವೇ ಕಾರಣ ಎಂದು ಪರಿಗಣಿಸಿ ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ. ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments