Webdunia - Bharat's app for daily news and videos

Install App

ತುಮಕೂರಿನಲ್ಲಿ ಎರಡು ಕಡೆ ಪ್ರತ್ಯೇಕ ಅಪಘಾತ: ನಾಲ್ವರು ಸಾವು

Webdunia
ಮಂಗಳವಾರ, 6 ಅಕ್ಟೋಬರ್ 2015 (12:40 IST)
ಜಿಲ್ಲೆಯ ಎರಡು ಪ್ರತ್ಯೇಕ ಕಡೆ ರಸ್ತೆ ಅಪಘಾತ ಸಂಭವಿಸಿದ್ದು, ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. 
 
ನಗರದ ಎನ್.ಹೆಚ್ 48 ರ ರಸ್ತೆ ಹಾದಿಯಲ್ಲಿರುವ ನಂದಿಹಳ್ಳಿ ಮತ್ತು ಗುಬ್ಬಿ ತಾಲೂಕಿನ ಶಿವಸಂದ್ರ ಬಳಿ ಎರಡು ಪ್ರತ್ಯೇಕ ಅಪಘಾತ ಸಂಭವಿಸಿವೆ.
 
ತಮಕೂರು ಹೊರವಲಯದ ಎನ್.ಹೆಚ್ 48 ರ ನಂದಿಹಳ್ಳಿ ಬಳಿ ನಡೆದ ಅಪಘಾತದಲ್ಲಿ ಅಪರಿಚತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಮೃತರನ್ನು ಬಾಲಾಜಿ(18) ಮತ್ತು ಮೋಹಿನ್(27) ಎಂದು ಹೇಳಲಾಗಿದ್ದು, ಮೃತರಿಬ್ಬರೂ ಕೂಡ ಬೆಂಗಳೂರಿನ ಪೀಣ್ಯ ಮೂಲದವರಾಗಿದ್ದಾರೆ. ಇವರು ನಿನ್ನೆ ತಡರಾತ್ರಿ 1.30ವ ರೇಳೆಯಲ್ಲಿ ತುಮಕೂರು ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದರು ಎನ್ನಲಾಗಿದ್ದು, ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಇಲ್ಲಿನ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ. 
 
ಮತ್ತೊಂದೆಡೆ ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಈ ಘಟನೆಯು ಗುಬ್ಬಿ ತಾಲೂಕಿನ ಶಿವಸಂದ್ರ ಬಳಿ ನಡೆದಿದ್ದು, ಮೃತ ಯುವಕರು ತಿಪಟೂರು ಮೂಲದವರು ಎಂದು ಗುರುತಿಸಲಾಗಿದೆ. ಈ ಸಂಬಂಧ ಗುಬ್ಬಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments