Webdunia - Bharat's app for daily news and videos

Install App

ಸ್ನೇಹಿತರ ಕಣ್ಣೇದುರೇ ಕಲ್ಯಾಣಿಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು: ಆಗಿದ್ದೇನು ಗೊತ್ತಾ

Sampriya
ಭಾನುವಾರ, 9 ಫೆಬ್ರವರಿ 2025 (15:20 IST)
Photo Courtesy X
ಬೆಂಗಳೂರು : ಸ್ನೇಹಿತರೆದುರೇ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ಶನಿವಾರ ನಡೆದಿದೆ.

ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ಹೆಬ್ಬಗೋಡಿಯ ಎಸ್.ಎಫ್.ಎಸ್​ ಕಾಲೇಜಿನ ವಿದ್ಯಾರ್ಥಿಗಳಾದ ದೀಪು (20), ಯೋಗಿಶ್ವರನ್​ (20) ಮೃತಪಟ್ಟಿದ್ದಾರೆ.

ಕಲ್ಯಾಣಿಯಲ್ಲಿ ಈಜಲು ಐವರು ವಿದ್ಯಾರ್ಥಿಗಳು ತೆರಳಿದ್ದರು. ಮಧ್ಯಭಾಗದಲ್ಲಿ ಆಟವಾಡುತ್ತಿದ್ದಾಗ ಯೋಗೇಶ್ವರನ್ ಈಜು ಬರದೇ ಪರದಾಡುತ್ತಿರುವುದನ್ನು ನೋಡಿ ಸ್ನೇಹಿತ ದೀಪು ನೆರವಿಗೆ ಧಾವಿಸಿದ್ದಾನೆ. ಈ ವೇಳೆ ಇಬ್ಬರಿಗೂ ಈಜಲು ಕಷ್ಟವಾಗಿ ಮುಳುಗಲು ಆರಂಭಿಸಿದರು.

ಅಲ್ಲೇ ಉಳಿದ ಸ್ನೇಹಿತರಿದ್ದರೂ ಅವರಿಗೆ ಸರಿಯಾಗಿ ಈಜು ಬಾರದೇ ಯಾರೂ ರಕ್ಷಣೆಗೆ ತೆರಳಲಿಲ್ಲ. ಹೀಗಾಗಿ ಅವರ ಕಣ್ಣುದುರೇ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ. ಕಲ್ಯಾಣಿ ಮೇಲೆ ನಿಂತಿದ್ದ ಉಳಿದ ಸ್ನೇಹಿತರು ವಿಡಿಯೋ ಮಾಡಿದ್ದು ವಿದ್ಯಾರ್ಥಿಗಳ ಕೊನೆ ಕ್ಷಣದ ಮನಕಲಕುವ ದೃಶ್ಯ ಸೆರೆಯಾಗಿದೆ.

ಕೂಡಲೇ ಸ್ನೇಹಿತರು ಬನ್ನೇರುಘಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಮೃತದೇಹವನ್ನು ಹೊರತೆಗೆದಿದ್ದಾರೆ. ಬನ್ನೇರುಘಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಭಾರತೀಯ ಸೇನೆಗೆ ಪ್ರತಿದಾಳಿ ನಡೆಸಲು ಪೂರ್ಣ ಅಧಿಕಾರ

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್

ಭಾರತ, ಪಾಕಿಸ್ತಾನ ನಡುವೆ ಮಧ್ಯಸ್ಥಿಕೆ ನಡೆಸಲು ಡೊನಾಲ್ಡ್ ಟ್ರಂಪ್ ಯಾರು

India Pakistan: ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ, ಐಎಎಫ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments