Webdunia - Bharat's app for daily news and videos

Install App

ಸಂಚಾರ ನಿಯಮ ಉಲ್ಲಂಘನೆ ಮಾಡಿಕೊಂಡು ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರ

Webdunia
ಶನಿವಾರ, 11 ಸೆಪ್ಟಂಬರ್ 2021 (20:49 IST)
ಸಂಚಾರ ಜಂಟಿ ಪೆÇಲೀಸ್ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಅವರ ಅಭಿಮಾನಿ ಎಂದು ತನ್ನ ಬೈಕ್ ಮೇಲೆ ರವಿಕಾಂತೇಗೌಡರ ಹೆಸರು ಹಾಗೂ ್ತ ಪ್ರೆಸ್ ಎಂದು ಮುದ್ರಿಸಿಕೊಂಡು ಸಂಚಾರ ನಿಯಮ ಉಲ್ಲಂಘನೆ ಮಾಡಿಕೊಂಡು ಓಡಾಡುತ್ತಿದ್ದ ದ್ವಿಚಕ್ರ ವಾಹನ ಸವಾರನೊಬ್ಬನನ್ನು ಜಯನಗರ ಸಂಚಾರ ಠಾಣೆ ಪೆÇಲೀಸರು ವಶಕ್ಕೆ ಪಡೆದು ಬೈಕ್ ಜಪ್ತಿ ಮಾಡಿದ್ದಾರೆ.  
ತ್ಯಾಗರಾಜ ನಗರದ ನಿವಾಸಿ ಪಿ. ಗಿರೀಶ್ ?ಬಾಬು (58) ಆರೋಪಿ. ಆರೋಪಿಯ ಬೈಕ್ ಜಪ್ತಿ ಮಾಡಲಾಗಿದ್ದು, ಇದುವರೆಗೂ 42 ಸಂಚಾರ ನಿಯಮ ಉಲ್ಲಂಘಿಸಿರುವವುದು ಪತ್ತೆಯಾಗಿದ್ದು, 20200 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಪೆÇಲೀಸರು ತಿಳಿಸಿದರು. 
ಆರೋಪಿ ಗೀರಿಶ್ ಬಾಬು ತಾನು ಆರ್‍ಟಿಐ ಕಾರ್ಯಕರ್ತ ಎಂದು ಘೋಷಿಸಿಕೊಂಡಿದ್ದ. ಕೆಲವು ಅಧಿಕಾರಿಗಳ ವಿರುದ್ಧ ದೂರು ನೀಡುವುದು ಹಾಗೂ ಸಾರ್ವಜನಿಕರಲ್ಲಿ ಪ್ರಭಾವ ಬೀರಲು  ತನ್ನ ಬೈಕ್‍ನ ನಂಬರ್ ಪ್ಲೇಟ್ ಮೇಲೆ ರವಿಕಾಂತೇಗೌಡರ ಹೆಸರು , ಪ್ರೆಸ್ ಎಂದು ಮುದ್ರಿಸಿಕೊಂಡು ಓಡಾಡುತ್ತಿರುವ ಫೆÇೀಟೊಗಳು ವೈರಲ್ ಆಗಿದ್ದವು.  
ಈ ಬಗ್ಗೆ ತಿಳಿದ ಜಂಟಿ ಪೆÇಲೀಸ್ ಆಯಕ್ತ ಡಾ.ಬಿ.ಆರ್. ರವಿಕಾಂತೇಗೌಡ ಆರೋಪಿಯ ಪತ್ತೆಗಾಗಿ ಜಯನಗರ ಸಂಚಾರ ಠಾಣೆ ಪೆÇಲೀಸ್ ಇನ್ಸ್‍ಪೆಕ್ಟರ್ ಪಿ.ಎನ್. ಈಶ್ವರಿ ನೇತೃತ್ವದಲ್ಲಿ ತಂಡವನ್ನು ರಚಿಸಿ ಕಾರ್ಯಾಚರಣೆಗೆ ಸೂಚಿಸಿದ್ದರು. ಈ ತಂಡ ಆರೋಪಿಯನ್ನು ಪತ್ತೆ ಮಾಡಿ, ವಾಹನ ವಶಕ್ಕೆ ಪಡೆದಿದೆ. ಯಾರಾದರೂ ಹೀಗೆ ಪೆÇಲೀಸ್ ಅಧಿಕಾರಿಗಳ ಅಥವಾ ಮಾಧ್ಯಮದ ಹೆಸರು ದುರ್ಬಳಕೆ ಮಾಡಿಕೊಂಡು ಓಡಾಡುತ್ತಿದ್ದಲ್ಲಿ ಸಂಬಂಧಪಟ್ಟ ಠಾಣೆಗೆ ತಿಳಿಸಿದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಂಟಿ ಆಯುಕ್ತರು ತಿಳಿಸಿದ್ದಾರೆ. 
ಸದ್ಯ ಆರೋಪಿ ಪತ್ತೆಯಿಂದ ಇದುವರೆಗೂ 42 ಬಾರಿ ಸಂಚಾರ ನಿಯಮ ಉಲ್ಲಂಘಿಸಿರುವುದು ಪತ್ತೆಯಾಗಿದೆ. 20,200ಊ. ದಂಡ ವಿಧಿಸಿ ಬೈಕ್ ವಶಪಡಿಸಿಕೊಳ್ಳಲಾಗಿದೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ರೀತಿ ಪೆÇಲೀಸ್ ಅಧಿಕಾರಿಗಳ ಹೆಸರನ್ನು ಅಥವಾ ಮಾಧ್ಯಮದ ಹೆಸರನ್ನು ದುರುಪಯೋಗಪಡಿಸಿಕೊಳ್ಳುವ ಮಾಹಿತಿ ಕಂಡು ಬಂದಲ್ಲಿ ಸಂಬಂಧಪಟ್ಟ ಪೆÇಲೀಸ್ ಠಾಣೆಗೆ ದೂರು ನೀಡಲು ಪೆÇಲೀಸರು ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments