Webdunia - Bharat's app for daily news and videos

Install App

ಯಾವ ಕಾರಣವಿಲ್ಲದೇ ಹೆಣವಾದ ಇಬ್ಬರು ಮಹಿಳೆಯರು: ಯಾಕೆ ಗೊತ್ತಾ?

Webdunia
ಭಾನುವಾರ, 2 ಡಿಸೆಂಬರ್ 2018 (16:09 IST)
ವಾಯುವಿಹಾರಕ್ಕೆ ಹೊರಟಿದ್ದ ಇಬ್ಬರು ಮಹಿಳೆಯರು ಕೊಲೆಗೀಡಾದ ಘಟನೆ ನಡೆದಿದೆ.

ವಾಯುವಿಹಾರಕ್ಕೆ ಹೊರಟಿದ್ದ ಇಬ್ಬರು ಮಹಿಳೆಯರನ್ನು ಮಾನಸಿಕ ಅಸ್ವಸ್ಥನೊಬ್ಬ ಕಟ್ಟಿಗೆಯಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿದ ದಾರುಣ ಘಟನೆ ಬೀದರ್ ನಗರದ ಜನವಾಡಾ ರಸ್ತೆಯ ಲೇಬರ್ ಕಾಲೋನಿಯಲ್ಲಿ ಇಂದು ಮುಂಜಾನೆ ನಡೆದಿದೆ.
ಲೇಬರ್ ಕಾಲೋನಿಯ ಲಲಿತಮ್ಮ (45) ಮತ್ತು ಅವರ ನಾದಿನಿ ದುರ್ಗಮ್ಮ (50) ಕೊಲೆಯಾದ ಮಹಿಳೆಯರು.

ಬೆಳಿಗ್ಗೆ ಎಂದಿನಂತೆ ಲಲಿತಮ್ಮ ಮತ್ತು ದುರ್ಗಮ್ಮ ಅವರು ಕಾಲೋನಿಯಲ್ಲಿ ವಾಯುವಿಹಾರಕ್ಕೆ ಹೊರಟಿದ್ದಾಗ ಕಾಲೋನಿಯಲ್ಲಿರುವ ಹನುಮಾನ ಮಂದಿರದ ಬಳಿ ನಿಂತಿದ್ದ ಮಾನಸಿಕ ಅಸ್ವಸ್ಥನೊಬ್ಬ ಹನುಮಾನ ದೇವಸ್ಥಾನದೊಳಗೆ ಕಲ್ಲು ಮತ್ತು ಚಪ್ಪಲಿ ಎಸೆಯುತ್ತಿದ್ದುದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಕೋಪೇದ್ರಿಕ್ತನಾದ ಮಾನಸಿಕ ಅಸ್ವಸ್ಥ ಹನುಮಾನ ದೇವರ ಖಾಂಡಿಗೆಂದು ದೇವಸ್ಥಾನದ ಆವರಣದಲ್ಲಿ ತಂದು ಹಾಕಿದ್ದ ಕಟ್ಟಿಗೆ ತೆಗೆದುಕೊಂಡು ಲಲಿತಮ್ಮ ಅವರಿಗೆ ಮನಬಂದಂತೆ ಹೊಡೆದಿದ್ದಾನೆ. ಲಲಿತಮ್ಮ ಅವರಿಗೆ ಹೊಡೆಯುತ್ತಿರುವುದನ್ನು ಗಮನಿಸಿದ ದುರ್ಗಮ್ಮ ಬಡಿಸಲು ಹೋದಾಗ ಅವರಿಗೂ ಕಟ್ಟಿಗೆಯಿಂದ ಮನಬಂದಂತೆ ಹೊಡೆದು ಇಬ್ಬರನ್ನು ಸಾಯಿಸಿದ್ದಾನೆ.

ಸುದ್ದಿ ತಿಳಿದು ಲಲಿತಮ್ಮ ಅವರ ಮಗ ಮತ್ತು ಇನ್ನೊಬ್ಬ ವ್ಯಕ್ತಿ ಸ್ಥಳಕ್ಕೆ ಬಂದಾಗ ಲಲಿತಮ್ಮ ಅವರ ಮಗನಿಗೂ ಹೊಡೆಯಲು ಬೆನ್ನಟ್ಟಿದ್ದಾನೆ. ಲಲಿತಮ್ಮ ಅವರ ಮಗನೊಂದಿಗೆ ಬಂದಿದ್ದ ವ್ಯಕ್ತಿ ಚಿರಾಡಿದಾಗ ದೂರ ಸರಿದಿದ್ದಾನೆ. ಸಂಬಂಧ ಪೊಲೀಸರು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ವಡಗೇರಾ ಗ್ರಾಮದ ದೇವಿಂದ್ರಪ್ಪ ಎಂಬಾತನನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರ್ಷದ ಹಿಂದೆ ಅಪಘಾತದಲ್ಲಿ ಕಾಲು ಕಳೆದುಕೊಂಡಿದ್ದ ಹೆಡ್‌ಕಾನ್‌ಸ್ಟೇಬಲ್‌ ಕ್ವಾಟ್ರಸ್‌ನಲ್ಲೇ ಆತ್ಮಹತ್ಯೆ

ಅತ್ಯಾಚಾರ ಪ್ರಕರಣ: ಇದೇ 30ರಂದು ಪ್ರಜ್ವಲ್ ರೇವಣ್ಣಗೆ ಜಾಮೀನಾ, ಜೈಲಾ, ಮಹತ್ವದ ತೀರ್ಪು

ಲೈವ್‌ನಲ್ಲಿ ವರದಿ ಮಾಡುತ್ತಿರುವಾಗಲೇ ಪ್ರವಾಹದಲ್ಲಿ ಕೊಚ್ಚಿ ಹೋದ ಪಾಕ್‌ ವರದಿಗಾರ, Viral Vdeo

ಶಾಸಕರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಳ್ಳುತ್ತಿರುವಾಗಲೇ ರಮ್ಮಿ ಆಡುತ್ತಾ ಕೂತಾ ಉಪ ಅರಣ್ಯ ಸಂರಕ್ಷಣಾಧಿಕಾರಿ

ನೂರಾರು ಹುಡುಗರ ಗುಂಪೊಂದು ಹಾವು ಹಿಡಿದು ಗುಡ್ಡವೇರಿದ ವಿಡಿಯೋ, ಭಯಾನಕವಾಗಿರುವ ಸಂಪ್ರದಾಯದ ಹಿಂದಿದೆ ನಂಬಿಕೆ

ಮುಂದಿನ ಸುದ್ದಿ
Show comments