Webdunia - Bharat's app for daily news and videos

Install App

ಕಾಡಾನೆ ದಾಳಿಗೆ ಇಬ್ಬರು ಕಾರ್ಮಿಕರು ಬಲಿ ; ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

Webdunia
ಶನಿವಾರ, 12 ಮಾರ್ಚ್ 2022 (20:53 IST)
ಕಾಡಾನೆ ದಾಳಿಗೆ ಇಬ್ಬರು ಕಾಫಿತೋಟದ ಕಾರ್ಮಿಕರು ಬಲಿಯಾಗಿರುವ ಘಟನೆ ಬೇಲೂರು ತಾಲೂಕಿನ ಕಡೆಗರ್ಜೆ ಗ್ರಾಮದಲ್ಲಿ ನಡೆದಿದೆ.
ಮೃತ ಕಾರ್ಮಿಕರನ್ನು ‌ಕಾಚಿಕ್ಕಯ್ಯ (65) ಹಾಗೂ ಈರಯ್ಯ (68) ಎಂದು ಗುರುತಿಸಲಾಗಿದೆ. ಕಡೆಗರ್ಜೆಯ ತೋಟದಲ್ಲಿ ಶುಕ್ರವಾರ ಬೆಳಿಗ್ಗೆ ಕೆಲಸ ಮಾಡುವ ವೇಳೆ ಒಂಟಿ ಸಲಗ ದಾಳಿ ಮಾಡಿ ಇಬ್ಬರನ್ನು ಬಲಿ ಪಡೆದಿದ್ದು, ಈ ಘಟನೆಯಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ತಮ್ಮವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕಳೆದ ವಾರದಿಂದ ಈ ಭಾಗದಲ್ಲಿ ಆನೆಗಳ ಸಂಚಾರ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮನೆಮಾಡಿದೆ. ತೋಟದ ಕಾರ್ಮಿಕರು ಕೆಲಸಕ್ಕೆ ಹೋಗಲು ಭಯಪಡುತ್ತಿದ್ದಾರೆ.
ಕಾಡಾನೆ ನಿಯಂತ್ರಣಕ್ಕೆ ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು,ಮೃತ ಕಾರ್ಮಿಕರಿಗೆ ಪರಿಹಾರದ ಜೊತೆಗೆ ಕಾಡಾನೆಗಳನ್ನು ಕೂಡಲೇ ಸ್ಥಳಾಂತರಿಸಬೇಕು ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ ಪರ ಬೇಹುಗಾರಿಗೆ: ತನಿಖೆ ವೇಳೆ ಜ್ಯೋತಿ ಮಲ್ಹೋತ್ರಾ ನಡವಳಿಕೆ ಕೇಳಿದ್ರೆ ದಂಗಾಗ್ತೀರಾ

Isreaeli Attack on Gaza: 54 ಪ್ಯಾಲೆಸ್ಟೀನಿಯರು ಸಜೀವ ದಹನ

Covid19: ಶಾಲಾ ಕಾಲೇಜು ಬಂದ್ ಆಗುತ್ತಾ, ಸಚಿವ ದಿನೇಶ್ ಗುಂಡೂರಾವ್ ಗುಡ್ ನ್ಯೂಸ್

ರಾಜ್ಯಕ್ಕೆ ಅವಧಿಪೂರ್ವ ಮುಂಗಾರು ಪ್ರವೇಶ: ಬೆಂಗಳೂರಿನಲ್ಲಿ ನೂರು ವರ್ಷಗಳ ದಾಖಲೆ ಮುರಿದ ಮಹಾಮಳೆ

ಮಾನನಷ್ಟ ಮೊಕದ್ದಮೆ ನಾಟಕವೆಲ್ಲಾ ನಮ್ಮತ್ರ ಬೇಡ ಸ್ವಾಮಿ ಎಂದ್ರು ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments