ಮಲಗಿದ್ದಲ್ಲಿಯೇ ಇಬ್ಬರು ಯುವಕರ ಸಾವು!

Webdunia
ಶನಿವಾರ, 15 ಜುಲೈ 2023 (10:30 IST)
ಹಾಸನ : ಕೆಲಸ ಅರಸಿಕೊಂಡು ಹಾಸನ ನಗರಕ್ಕೆ ಬಂದಿದ್ದ ಉತ್ತರ ಪ್ರದೇಶ ಮೂಲದ ಇಬ್ಬರು ಯುವಕರು ಮಲಗಿದ್ದಲ್ಲಿಯೇ ಅನುಮಾನಾಸ್ಪದವಾಗಿ ಸಾವನಪ್ಪಿರುವ ಘಟನೆ ತಾಲೂಕಿನ ಹನುಮಂತಪುರದಲ್ಲಿ ನಡೆದಿದೆ.

ಉತ್ತರಪ್ರದೇಶದ ನಯನ್ಪುರ ಗ್ರಾಮದ ರಾಮ್ ಸಂಜೀವನ್ (30) ಹಾಗೂ ನವಾಬ್ (24) ಮೃತ ದುರ್ದೈವಿಗಳು. ಇವರಿಬ್ಬರು ಕಳೆದ ಹದಿನೈದು ದಿನದ ಹಿಂದೆ ಕೆಲಸ ಕೊಡಿಸುವಂತೆ ಹಾಸನದಲ್ಲಿರುವ ತನ್ನ ಸ್ನೇಹಿತನಾದ ವಿಕ್ರಂ ಎಂಬಾತನನ್ನು ಸಂಪರ್ಕಿಸಿದ್ದರು.

ಈ ವೇಳೆ ವಿಕ್ರಂ ಇಬ್ಬರಿಗೂ ಕೆಲಸ ಕೊಡಿಸುವುದಾಗಿ ಹಾಸನಕ್ಕೆ ಕರೆಸಿಕೊಂಡಿದ್ದ. ವಾರದ ಹಿಂದೆ ಹಾಸನಕ್ಕೆ ಬಂದಿದ್ದ ರಾಮ್ ಸಂಜೀವನ್ ಹಾಗೂ ನವಾಬ್ ಹನುಮಂತಪುರದಲ್ಲಿ ಬಾಡಿಗೆ ರೂಂ ಪಡೆದು ನಗರದ ಹೊರವಲಯದ ಖಾಸಗಿ ಕಂಪನಿಯಲ್ಲಿ ಎರಡು ದಿನ ಕೆಲಸ ಮಾಡಿದ್ದರು.

ಬಳಿಕ ಇಬ್ಬರಿಗೂ ವಿಪರೀತ ಜ್ವರ ಹಾಗೂ ನೆಗಡಿ ಕಾಣಿಸಿಕೊಂಡಿತ್ತು. ಹೀಗಾಗಿ ಕೆಲಸಕ್ಕೆ ರಜೆ ಹಾಕಿ ಗುರುವಾರ ಇಬ್ಬರೂ ಖಾಸಗಿ ಕ್ಲಿನಿಕ್ಗೆ ತೆರಳಿ ಚಿಕಿತ್ಸೆ ಪಡೆದುಕೊಂಡು ಬಂದು ರಾತ್ರಿ ಊಟ ಮಾಡಿ ಮಲಗಿದ್ದರು. ಶುಕ್ರವಾರ ಇಡೀ ದಿನ ರೂಂ ಬಾಗಿಲು ತೆರೆಯದ ಕಾರಣ ಅನುಮಾನಗೊಂಡು ಮನೆ ಮಾಲೀಕರು ರೂಂ ಬಾಗಿಲು ಒಡೆದು ನೋಡಿದಾಗ ಮಲಗಿದ್ದಲ್ಲಿಯೇ ಇಬ್ಬರು ಯುವಕರ ಮೃತದೇಹಗಳು ಪತ್ತೆಯಾಗಿವೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments