Select Your Language

Notifications

webdunia
webdunia
webdunia
webdunia

ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಶವ ಪತ್ತೆ: ಕೊಲೆ ಶಂಕೆ

ಸುಟ್ಟ ಸ್ಥಿತಿಯಲ್ಲಿ ಇಬ್ಬರು ಯುವಕರ ಶವ ಪತ್ತೆ: ಕೊಲೆ ಶಂಕೆ
ರಾಮನಗರ , ಮಂಗಳವಾರ, 1 ಸೆಪ್ಟಂಬರ್ 2015 (10:41 IST)
ಇಬ್ಬರು ಅಪರಿಚಿತ ಯುವಕರ ಶವಗಳು ಸುಟ್ಟು ಕರಕಲಾಗಿರುವ ಸ್ಥಿತಿಯಲ್ಲಿ ಇಂದು ಜಿಲ್ಲೆಯ ಮಾಗಡಿ ತಾಲೂಕಿನ ಸುಬ್ಬಯ್ಯನಪಾಳ್ಯದ ಹೊರ ವಲಯದಲ್ಲಿ ಪತ್ತೆಯಾಗಿವೆ.
 
ಇಂದು ಬೆಳಗ್ಗೆ ಗ್ರಾಮಸ್ಥರು ಓಡಾಡುತ್ತಿದ್ದ ವೇಳೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದ್ದು, ಮೃತ ಯುವಕರ ವಿವರ ತಿಳಿದು ಬಂದಿಲ್ಲ. ಆದರೆ ಶವಗಳನ್ನು ಕಂಡ ಕೂಡಲೇ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಪರಿಶೀಲಿಸುತ್ತಿದ್ದಾರೆ. ಅಲ್ಲದೆ ಹತ್ಯೆಗೈದು ಸುಟ್ಟು ಹಾಕಲಾಗಿದೆ ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. 
 
ಈ ಪ್ರಕರಣ ಸಂಬಂಧ ಮಾಗಡಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಲಾಗಿದೆ. 

Share this Story:

Follow Webdunia kannada