Webdunia - Bharat's app for daily news and videos

Install App

ಫೇಸ್‌ಬುಕ್ ಗೆಳೆಯನಿಂದ ಅತ್ಯಾಚಾರಕ್ಕೊಳಗಾದ ಶಾಲಾ ಬಾಲಕಿ

Webdunia
ಶನಿವಾರ, 30 ಸೆಪ್ಟಂಬರ್ 2017 (18:14 IST)
ಶಾಲೆಗೆ ತೆರಳುತ್ತಿದ್ದ 15 ವರ್ಷದ ಬಾಲಕಿಯನ್ನು ಅಪಹರಿಸಿದ ಆಕೆಯ ಫೇಸ್‌ಬುಕ್ ಸ್ನೇಹಿತನೊಬ್ಬ ಅತ್ಯಾಚಾರವೆಸಗಿದ ಹೇಯ ಘಟನೆ ವರದಿಯಾಗಿದೆ.
ಶಾಲೆಗೆ ತೆರಳುತ್ತಿದ್ದ ಬಾಲಕಿಯನ್ನು ಆಕೆಯ ಫೇಸ್‌ಬುಕ್ ಗೆಳೆಯ ಮತ್ತು ಆತನ ಸ್ನೇಹಿತ ಒತ್ತಾಯಪೂರ್ವಕವಾಗಿ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಶಾಲಾ ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಆಳಂದಿ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಇಬ್ಬರು ಕಾಮುಕರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ.
 
ಕಳೆದ ಒಂದು ವರ್ಷದ ಹಿಂದೆ ಫೇಸ್‌ಬುಕ್‌ನಲ್ಲಿ ಬಾಲಕಿಗೆ ಯುವಕನೊಬ್ಬನ ಪರಿಚಯವಾಗಿತ್ತು. ನಂತರ ಚಾಟ್ ಹಾಗೇ ಸುತ್ತಾಟ ಮುಂದುವರಿದಿತ್ತು. ಗುರುವಾರದಂದು ಬಾಲಕಿ ಬಸ್‌ಗಾಗಿ ಕಾಯುತ್ತಾ ನಿಂತಿರುವಾಗ ಅಲ್ಲಿಗೆ ಬಂದ ಆರೋಪಿ 23 ವರ್ಷ ವಯಸ್ಸಿನ ಮಹೇಶ್ ಬಿಡವೆ, ಕಾರಿನಲ್ಲಿ ಬರುವಂತೆ ಒತ್ತಾಯಿಸಿದ್ದಾನೆ.
 
ಆದರೆ, ಬಾಲಕಿ ನಿರಾಕರಿಸಿ ಬಸ್‌ನಲ್ಲಿ ತೆರಳಿದ್ದಾಳೆ. ಇದರಿಂದ ಆಕ್ರೋಶಗೊಂಡ ಮಹೇಶ್ ಬಸ್‌ನ್ನು ಹಿಂಬಾಲಿಸಿದ್ದಾನೆ. ಬಸ್ ಶಿವಾಜಿನಗರ್ ಬಸ್‌ನಿಲ್ದಾಣ ತಲುಪುತ್ತಿದ್ದಂತೆ ಕೆಳಗಿಳಿದ ಬಾಲಕಿಯನ್ನು ಒತ್ತಾಯಪೂರ್ವಕವಾಗಿ ಕಾರಿನಲ್ಲಿ ಕೂರಿಸಿಕೊಂಡು ಆಕೆಯನ್ನು ಆಳಂದಿ ಲಾಡ್ಜ್‌ಗೆ ಕರೆದುಕೊಂಡು ಬಂದಿದ್ದಾನೆ. ಇಬ್ಬರು ಆರೋಪಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಲ್ಲದೇ ಅನೈಸರ್ಗಿಕ ಸೆಕ್ಸ್‌ಗಾಗಿ ಒತ್ತಾಯಿಸಿದ್ದಾರೆ. ತದನಂತರ ಬಾಲಕಿಯನ್ನು ಆಕೆಯ ಮನೆಗೆ ತಲುಪಿಸಿದ್ದಾರೆ.  
 
ಅತ್ಯಾಚಾರಕ್ಕೊಳಗಾದ ಬಾಲಕಿ ತನ್ನ ಪೋಷಕರೊಂದಿಗೆ ಸಂಗಾವಿ ಪೊಲೀಸ್ ಠಾಣೆಗೆ ಆಗಮಿಸಿ ಆರೋಪಿಗಳ ವಿರುದ್ಧ ಅತ್ಯಾಚಾರ ದೂರು ದಾಖಲಿಸಿದ್ದಾಳೆ. ಪೊಲೀಸರು ಕೂಡಲೇ ಆರೋಪಿ ಮಹೇಶ್‌ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಹೇಶ್ ಗೆಳೆಯ ಪರಾರಿಯಾಗಿದ್ದು ಆತನನ್ನು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುಂಬಮೇಳದಲ್ಲೂ ಕಾಲ್ತುಳಿತ ಆಗಿಲ್ವಾ ಎಂದ ಸಿದ್ದರಾಮಯ್ಯ: ಆಗ ನೀವು ಟೀಕಿಸಿಲ್ವಾ ಎಂದ ಪಬ್ಲಿಕ್

Chinnaswamy stampede: ಪೊಲೀಸರು ಸೆಲೆಬ್ರೇಷನ್ ಬೇಡ ಎಂದಿದ್ರೂ ಹಠ ಹಿಡಿದವರು ಇವರೇ

Chinnaswamy stampede: ಅಣ್ಣಾವ್ರು ತೀರಿಕೊಂಡಾಗಲೂ ಹೀಗೇ ಆಗಿತ್ತು

Karnataka Weather: ಮಳೆಯಿಂದ ಸಾಕು ಸಾಕಾಗಿದ್ದರೆ ಈ ಅಪ್ ಡೇಟ್ ಗಮನಿಸಿ

Chinnaswamy Stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಿಎಂ ನಿಖರ ಮಾಹಿತಿ

ಮುಂದಿನ ಸುದ್ದಿ
Show comments