Webdunia - Bharat's app for daily news and videos

Install App

ಚುನಾವಣಾ ಆಯೋಗದ ನಿರ್ಧಾರ ಪ್ರಶ್ನಿಸಿದ ಉದ್ಧವ್

Webdunia
ಸೋಮವಾರ, 20 ಫೆಬ್ರವರಿ 2023 (17:26 IST)
ಶಿವಸೇನೆಯ ಚಿಹ್ನೆಯ ವಿವಾದವು ಇದೀಗ ಸುಪ್ರೀಂಕೋರ್ಟ್​ ತಲುಪಿದೆ. ಶಿವಸೇನೆ ವರ್ಸಸ್ ಶಿವಸೇನೆ ನಡುವಿನ ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ ಬಣಕ್ಕೆ ಗೆಲುವು ಸಿಕ್ಕಿದ್ದು, ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ತೀವ್ರ ಮುಖಭಂಗವಾಗಿದೆ. ಕೇಂದ್ರ ಚುನಾವಣಾ ಆಯೋಗ ಶಿವಸೇನೆಯ ಮೂಲ ಚಿಹ್ನೆಯಾದ ‘ಬಿಲ್ಲು ಬಾಣ’ವನ್ನು ಶಿಂದೆ ಬಣಕ್ಕೆ ನೀಡುವ ಮೂಲಕ ಶಿಂದೆ ಬಣವೇ ನಿಜವಾದ ಶಿವಸೇನೆ ಎಂದು ಘೋಷಿಸಿತ್ತು. ಶಿಂದೆ ಬಣಕ್ಕೆ ಚುನಾವಣಾ ಚಿಹ್ನೆ ‘ಬಿಲ್ಲು-ಬಾಣ’ ನೀಡುವ ಚುನಾವಣಾ ಆಯೋಗದ ನಿರ್ಧಾರವನ್ನು ಶಿವಸೇನೆ (ಉದ್ಧವ್ ಠಾಕ್ರೆ ಬಣ) ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದೆ. ಉದ್ಧವ್ ಬಣದ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಸಿಜೆಐ ಅವರಿಂದ ಈ ವಿಷಯದ ಬಗ್ಗೆ ಶೀಘ್ರವಾಗಿ ವಿಚಾರಣೆಗೆ ಒತ್ತಾಯಿಸಿದ್ದಾರೆ. ತಮ್ಮ ಬಣವವೇ ನಿಜವಾದ ಶಿವಸೇನಾ ಎಂದು ಪರಿಗಣಿಸಿ ಪಕ್ಷದ ಚುನಾವಣಾ ಚಿಹ್ನೆಯನ್ನು ನೀಡುವಂತೆ ಏಕನಾಥ ಶಿಂದೆ ಬಣ ಹಾಗೂ ಉದ್ಧವ್ ಠಾಕ್ರೆ ಬಣ ಚುನಾವಣಾ ಆಯೋಗದ ಮೊರೆ ಹೋಗಿದ್ದವು. ಆಯೋಗ ಅಂತಿಮವಾಗಿ ಬಿಲ್ಲು ಬಾಣ’ ಚಿಹ್ನೆಯನ್ನು ಶಿಂಧೆ ಬಣಕ್ಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ವಿಚಾರದಲ್ಲಿ ಆರ್‌ಎಸ್‌ಎಸ್ ವರ್ಸಸ್ ಆರ್‌ಎಸ್‌ಎಸ್ ಹೋರಾಟ: ಪ್ರಿಯಾಂಕ್‌ ಖರ್ಗೆ ಟಾಂಗ್‌

ಪ್ರವಾಹ ಪರಿಸ್ಥಿತಿ ತಡೆಗೆ ಪಾಕ್‌ ರಕ್ಷಣಾ ಸಚಿವ ನೀಡಿದ ಸಲಹೆಗೆ ವಿಶ್ವವೇ ಶಾಕ್‌

ಕೆ ಕವಿತಾ ಅಮಾನತು: ಇದೊಂದು ದೊಡ್ಡ ನಾಟಕ ಎಂದ ಕಾಂಗ್ರೆಸ್‌ ಸಂಸದ ಅನಿಲ್ ಕುಮಾರ್‌

ಮೋದಿ ತಾಯಿಗೆ ಅವಮಾನ, ಚುನಾವಣೆಯಲ್ಲಿ ಪ್ರತ್ಯುತ್ತರ ಎಂದ ಬಿಹಾರ ಮಹಿಳೆಯರು

ಬಾನು ಮುಪ್ತಾಕ್‌ ಕುಂಕುಮ ಹಚ್ಚಲಿ ಎನ್ನುವುದು ತರವಲ್ಲ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments