Publish Date: Tue, 25 Aug 2026 (17:32 IST)
Updated Date: Tue, 25 Aug 2026 (17:35 IST)
ಉಡುಪಿ: ಉಡುಪಿ ನಗರದ ದೇವಾಲಯವೊಂದರ ಕೊಳದಲ್ಲಿ ಮಂಗಳವಾರ (ಆಗಸ್ಟ್ 25) ತಡಮಧ್ಯಾಹ್ನ 9ನೇ ತರಗತಿಯ ಬಾಲಕನೊಬ್ಬ ಮುಳುಗಿ ಮೃತಪಟ್ಟಿದ್ದಾನೆ.
ಉಡುಪಿ ನಗರದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಕೊಳದಲ್ಲಿ ಈ ಘಟನೆ ಸಂಭವಿಸಿದೆ.
ಸ್ಥಳೀಯರ ಮನವಿಗೆ ಸ್ಪಂದಿಸಿದ ಈಜು ಪರಿಣಿತ ಈಶ್ವರ್ ಮಲ್ಪೆ ಅವರು ಕೊಳದ ಆಳಕ್ಕೆ ಹಲವು ಬಾರಿ ಇಳಿದು ಬಾಲಕನ ಮೃತದೇಹವನ್ನು ಹೊರತೆಗೆದರು.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ