Webdunia - Bharat's app for daily news and videos

Install App

ರೈಲು ಹಳಿಯ ಕಬ್ಬಿಣ ಕದಿಯುತ್ತಿದ್ದ ಮಕ್ಕಳನ್ನು ಹಿಡಿದ ಸಿಬ್ಬಂದಿಗೆ ಸನ್ಮಾನ ಬದಲು ಕೇಸ್ (ವಿಡಿಯೋ)

Krishnaveni K
ಸೋಮವಾರ, 17 ಫೆಬ್ರವರಿ 2025 (14:54 IST)
ಉಡುಪಿ: ರೈಲು ಹಳಿಯ ಕಬ್ಬಿಣ ಕದಿಯುತ್ತಿದ್ದ ಇಬ್ಬರು ಬಾಲಕರನ್ನು ಹಿಡಿದು ಪ್ರಶ್ನಿಸಿದ ರೈಲು ಸಿಬ್ಬಂದಿಗೆ ಈಗ ಸನ್ಮಾನದ ಬದಲು ಕೇಸ್ ಜಡಿದು ಶಿಕ್ಷೆ ನೀಡಲಾಗುತ್ತಿದೆ!

ಇದು ನಡೆದಿರುವುದು ಉಡುಪಿಯಲ್ಲಿ. ಹಳಿಯ ಕಬ್ಬಿಣ ಕದಿಯುತ್ತಿದ್ದ ಇಬ್ಬರು ಶಾಲಾ ಬಾಲಕರನ್ನು ಅಲ್ಲಿಯೇ ರೆಡ್ ಹ್ಯಾಂಡ್ ಆಗಿ ಹಿಡಿದು ಕೊಂಕಣ ರೈಲ್ವೇ ಸಿಬ್ಬಂದಿಯೊಬ್ಬರು ಬೆತ್ತದಿಂದ ಹೊಡೆದಿದ್ದಾರೆ. ಬಳಿಕ ನೀವು ಯಾರು ನಿಮ್ಮ ಶಾಲೆ ಯಾವುದು ಎಂದೆಲ್ಲಾ ಪ್ರಶ್ನಿಸಿ ವಿಡಿಯೋ ಮಾಡಿದ್ದಾರೆ.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ರೈಲು ಹಳಿಯ ಕಬ್ಬಿಣ ಕಿತ್ತು ಹಾಕುವುದು ಗಂಭೀರ ವಿಚಾರವಾಗಿದ್ದು, ಇದರಿಂದ ರೈಲು ಹಳಿ ತಪ್ಪಿ ಭಾರೀ ಅನಾಹುತವಾಗುವ ಸಂಭವವಿದೆ. ಇಂತಹ ಅಪಾಯ ತಪ್ಪಿಸಿದ ಸಿಬ್ಬಂದಿಗೆ ಈಗ ಸನ್ಮಾನದ ಬದಲು ಶಿಕ್ಷೆಯಾಗುತ್ತಿರುವುದು ವಿಪರ್ಯಾಸ.

ಇಬ್ಬರು ಶಾಲಾ ಬಾಲಕರಾಗಿದ್ದು ಇವರಲ್ಲಿ ಒಬ್ಬಾತನ ಪೋಷಕರು ಘಟನೆ ಸಂಬಂಧ ಪೊಲೀಸರಿಗೆ ದೂರು ನೀಡಿದ್ದಾರೆ. ನನ್ನ ಮಗನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ನೀಡಿದ್ದಾರೆ. ಈ ಕಾರಣಕ್ಕೆ ಸಿಬ್ಬಂದಿ ಮೇಲೆ ಈಗ ಕೇಸ್ ದಾಖಲಾಗಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ರೈಲು ಹಳಿಗೆ ಹಾನಿ ಮಾಡುವುದು ಗಂಭೀರ ಅಪರಾಧವಾಗಿದೆ. ಈ ತಪ್ಪು ಮಾಡಿದವರನ್ನು ಹಿಡಿದುಕೊಟ್ಟ ಸಿಬ್ಬಂದಿ ಮೇಲೆಯೇ ಕೇಸ್ ಹಾಕಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಯೂಟ್ಯೂಬರ್‌ಗಳ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಒಡಿಶಾ: 3 ಅಪ್ರಾಪ್ತರ ಮೇಲೆ ನಿರಂತರ ಅತ್ಯಾಚಾರ, ಕಾಮುಕನಿಗೆ ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಕ್ರಿಕೆಟಿಗ ಸಚಿನ್ ಮಗಳು ಸಾರಾಗೆ ಜಾಗತಿಕ ಮಟ್ಟದಲ್ಲಿ ಒಲಿಯಿತು ದೊಡ್ಡ ಅದೃಷ್ಟ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಮುಂದಿನ ಸುದ್ದಿ
Show comments