ಹಡಗನ್ನೇ ಸ್ಫೋಟಿಸಿಕೊಂಡ ಉಕ್ರೇನ್ ಸೇನೆ!

Webdunia
ಶನಿವಾರ, 5 ಮಾರ್ಚ್ 2022 (07:50 IST)
ಕೀವ್ : ಉಕ್ರೇನ್ ಮೇಲೆ ರಷ್ಯಾ ಯುದ್ಧ ಶುರು ಮಾಡಿ ಇವತ್ತಿಗೆ ಒಂಬತ್ತನೇ ದಿನ.

ಈ ನಡುವೆ ಉಕ್ರೇನ್ನ ಹಡಗೊಂದನ್ನು ಉಕ್ರೇನ್ ಸೈನಿಕರೇ ಸ್ಫೋಟಿಸಿ ಮುಳುಗಿಸಿದ್ದಾರೆ. ರಷ್ಯಾ ಸೇನೆ ಕಂಡುಕೇಳರಿಯದ ರೀತಿಯಲ್ಲಿ ಉಕ್ರೇನ್ ಮೇಲೆ ಬಾಂಬ್, ಕ್ಷಿಪಣಿ ದಾಳಿ ನಡೆಸ್ತಿವೆ.

ಈ ಹಿನ್ನೆಲೆ ಖಾರ್ಕೀವ್, ಚೆರ್ನಿಹೀವ್, ಸುಮಿ, ಕೀವ್ ನಗರಗಳು ತತ್ತರಿಸಿದ್ದು, ಸ್ಮಶಾನದಂತಾಗಿಬಿಟ್ಟಿವೆ. ಸದ್ಯ ರಷ್ಯಾ ಆರ್ಮಿ ಕೀವ್ನಿಂದ 20 ಮೈಲಿ ದೂರದಲ್ಲಿ ಬೀಡುಬಿಟ್ಟಿದೆ. ಮುಂದಿನ ಆದೇಶಕ್ಕಾಗಿ ಕಾಯ್ತಿದೆ. 

ಜಾಪೋರಿಷಿಯಾ ಸಮೀಪದ ಎನರ್ವೋದರ್ ನಗರ ವಶಕ್ಕೆ ಪಡೆಯಲು ಮುಂದಡಿ ಇಟ್ಟಿದೆ. ಭಾರೀ ಸಾವು-ನೋವು, ಆರ್ಥಿಕ ನಷ್ಟ ಉಂಟಾಗ್ತಿದ್ದರೂ, ರಷ್ಯಾ ಸೇನೆ ವಿರುದ್ಧ ಉಕ್ರೇನ್ ಪಡೆಗಳು ಹಿಂದಡಿಯಿಟ್ಟಿಲ್ಲ. ತೀವ್ರ ಸ್ವರೂಪದಲ್ಲಿ ತಿರುಗೇಟು ನೀಡುತ್ತಿವೆ. ಗೆರಿಲ್ಲಾ ಮಾದರಿಯ ಯುದ್ಧವ್ಯೂಹದ ಮೂಲಕ ರಷ್ಯಾ ಪಡೆಗಳನ್ನು ಎದಿರುಸುತ್ತಿವೆ. ಕಂಡಕಂಡದಲ್ಲಿ ರಷ್ಯಾದ ಯುದ್ಧ ಟ್ಯಾಂಕ್ಗಳಿಗೆ ಬೆಂಕಿ ಹಚ್ಚುತ್ತಿವೆ.

ಕೀವ್ ಜೂನಲ್ಲಿನ ಪ್ರಾಣಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಈ ಮಧ್ಯೆ ಉಕ್ರೇನ್ನ ಹಡಗೊಂದನ್ನು ಉಕ್ರೇನ್ ಸೈನಿಕರೇ ಸ್ಫೋಟಿಸಿ ಮುಳುಗಿಸಿದ್ದಾರೆ. ಮೊದಲು ಇದನ್ನು ನ್ಯಾಟೋ ಸದಸ್ಯ ರಾಷ್ಟ್ರ ಎಸ್ಟೋನಿಯಾಗೆ ಸೇರಿದ ಹಡಗು ಎಂದು ಹೇಳಲಾಗಿತ್ತು. ಈಗ ಉಕ್ರೇನ್ ನೌಕಾ ಸೇನೆಯವರೇ ನೌಕೆಯನ್ನುಸ್ಫೋಟಿಸಿ ಮುಳುಗಿಸಿದ್ದಾರೆ.

ಒಂದು ವೇಳೆ ಈ ನೌಕೆ ರಷ್ಯಾ ಸೇನೆಗೆ ಸಿಕ್ಕಿದರೆ ವಿಜಯಿ ಆಗಿದ್ದೇವೆ ಎಂದು ಹೇಳಿಕೊಳ್ಳುವ ಸಾಧ್ಯತೆ ಇತ್ತು. ಶತ್ರು ರಾಷ್ಟ್ರಕ್ಕೆ ಮಾಹಿತಿ ಸುಲಭವಾಗಿ ಸಿಗುವ ಸಾಧ್ಯತೆ ಇತ್ತು. ಈ ಕಾರಣಕ್ಕೆ ಉಕ್ರೇನ್ ಸೇನೆಯೇ ಹಡಗನ್ನು ಸ್ಫೋಟಗೊಳಿಸಿದೆ ಎಂದು ವರದಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಸಹಾಯ ಕೇಳಲು ಬಂದ ಯುವತಿಗೆ ಲೈಂಗಿಕ ದೌರ್ಜನ್ಯ, ಕೋರ್ಟ್‌ಗೆ ಹಾಜರಾಗಲು ಬಿಎಸ್‌ವೈಗೆ ಸಮನ್ಸ್‌

ಸೂಸೈಡ್ ಬಾಂಬರ್ ದಾರಿ ತಪ್ಪಿದ ಮಗ: ಕಾಂಗ್ರೆಸ್ ಸಂಸದನ ಹೇಳಿಕೆ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments