ಉಕ್ರೇನ್ ನಮ್ಮ ವಿದ್ಯಾರ್ಥಿಗಳು ಸುರಕ್ಷಿತವಾಗಿ ಬರುತ್ತಾರೆ

Webdunia
ಭಾನುವಾರ, 27 ಫೆಬ್ರವರಿ 2022 (16:52 IST)
ಉಕ್ರೇನ್ ನಲ್ಲಿರುವ ಇನ್ನುಳಿದ ವಿದ್ಯಾರ್ಥಿಗಳನ್ನು ರಾಜ್ಯಕ್ಕೆ ಸುರಕ್ಷಿತವಾಗಿ ಕರೆತರಲು ಕ್ರಮಕೈಗೊಳ್ಳುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲ ವಿದ್ಯಾರ್ಥಿಗಳು ರೊಮೆನಿಯಾ ಮೂಲಕ ಭಾರತಕ್ಕೆ ಮರಳಿದ್ದಾರೆ
ಮುಂಬೈ ಹಾಗೂ ನವದೆಹಲಿಗೆ ಆಗಮಿಸಿರುವ ವಿದ್ಯಾರ್ಥಿಗಳನ್ನು ಬೆಂಗಳೂರಿಗೆ ಸರ್ಕಾರವೇ ಎಲ್ಲ ವ್ಯವಸ್ಥೆ ಮಾಡಿ ಕರೆತರಲಾಗುತ್ತಿದೆ. ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ವಿದ್ಯಾರ್ಥಿಗಳ ಪ್ರಯಾಣ ಹಾಗೂ ಇನ್ನಿತರ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದರು. ಇನ್ನೂ ಉಕ್ರೇನ್ ನಿಂದ ಇನ್ನುಳಿದ ವಿದ್ಯಾರ್ಥಿಗಳನ್ನು ಕರೆತರಲು ಕೇಂದ್ರ ವಿದೇಶಾಂಗ ಸಚಿವರ ಜೊತೆ ಮುಖ್ಯಮಂತ್ರಿಗಳು ನಿರಂತರ ಸಂಪರ್ಕದಲ್ಲಿದ್ದಾರೆ. ಕೇಂದ್ರ ಹಾಗೂ ರಾಜ್ಯದ ಸಹಾಯ ವಾಣಿಗಳು ನಿರಂತರವಾಗಿ ಕಾರ್ಯನಿರ್ವಹಿಸುತ್ತಿವೆ. ಹಲವಾರು ವಿದ್ಯಾರ್ಥಿಗಳು ಹಾಗೂ ಪೋಷಕರ ಜೊತೆಗೆ ಚರ್ಚಿಸಲಾಗಿದೆ. ಉಕ್ರೇನ್ ನ ಕಾರ್ಕೈವ್ ನಲ್ಲಿ ಬಹಳಷ್ಟು ವಿದ್ಯಾರ್ಥಿಗಳು ಸಿಲುಕಿದ್ದು, ಅದೇ ಪ್ರದೇಶದಲ್ಲಿ ಪ್ರಸ್ತುತ ಯುದ್ಧ ನಡೆಯುತ್ತಿರುವುದಾಗಿ ತಿಳಿದುಬಂದಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments