Webdunia - Bharat's app for daily news and videos

Install App

ಉಮೇಶ್ ಕತ್ತಿ ನೇರ ನುಡಿಯ ರಾಜಕಾರಣಿ- ಸಂಸದ ಪ್ರತಾಪ್ ಸಿಂಹ

Webdunia
ಬುಧವಾರ, 7 ಸೆಪ್ಟಂಬರ್ 2022 (21:04 IST)
ಬೆಂಗಳೂರಿನ ಆಳುವ ದೊರೆಗಳ ಗಮನ ಸೆಳೆಯಲು ಈ ರೀತಿಯ ಹೇಳಿಕೆ ನೀಡುತ್ತಿದ್ದರು. ಅವರಿಗೆ ಚಾಟಿ ಏಟು ನೀಡಲು ಈ ರೀತಿ ಹೇಳುತ್ತಿದ್ದರು. ನಾವು ಅರ್ಥ ಮಾಡಿಕೊಳ್ಳುತ್ತಿರಲಿಲ್ಲ ಅಷ್ಟೇ ಎಂದು ಸಂಸದ ಪ್ರತಾಪ್ ಸಿಂಹ  ಹೇಳಿದರು.
 
ಸಚಿವ ಉಮೇಶ್ ಕತ್ತಿ  ನಿಧನ ಹಿನ್ನೆಲೆಯಲ್ಲಿ ಅವರ ಆತ್ಮಕ್ಕೆ ಶಾಂತಿ ನೀಡುವಂತೆ ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಮೇಶ್ ಕತ್ತಿ ನೇರ ನುಡಿಯ ರಾಜಕಾರಣಿ. ಅವರ ಅಗಲಿಕೆಯಿಂದ ಉತ್ತರ ಕರ್ನಾಟಕ  ದ ದೊಡ್ಡ ಧ್ವನಿ ಹುದುಗಿ ಹೋಗಿದೆ. ಪ್ರತ್ಯೇಕ ರಾಜ್ಯ ಹೇಳಿಕೆ, ವಿಭಜನೆಯ ಪರ ಅಂತಾ ವಿವಾದವಾಗಿತ್ತು. ಅಭಿವೃದ್ದಿ ವಿಚಾರವಾಗಿ ಅವರು ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿದ್ದರು ಎಂದರು.
 
ಬೆಂಗಳೂರಿನ ಆಳುವ ದೊರೆಗಳ ಗಮನ ಸೆಳೆಯಲು ಈ ರೀತಿಯ ಹೇಳಿಕೆ ನೀಡುತ್ತಿದ್ದರು. ಅವರಿಗೆ ಚಾಟಿ ಏಟು ನೀಡಲು ಈ ರೀತಿ ಹೇಳುತ್ತಿದ್ದರು. ನಾವು ಅರ್ಥ ಮಾಡಿಕೊಳ್ಳುತ್ತಿರಲಿಲ್ಲ ಅಷ್ಟೇ. ಕತ್ತಿ ಉತ್ತರ ಕರ್ನಾಟಕದ ಏಳಿಗೆ ಬಯಸುತ್ತಿದ್ದ ನಾಯಕ. ಅವರ ರೀತಿ ನೇರವಾಗಿ ಹೇಳುವ ನಾಯಕ ಮತ್ತೊಬ್ಬ ಸಿಗುವುದಿಲ್ಲ. ಅವರು ಅಭಿವೃದ್ದಿ ವಿಚಾರವಾಗಿ ಯಾರ ಮುಲಾಜಿಗೂ ಒಳಗಾಗದೆ ತರಾಟೆಗೆ ತೆಗೆದುಕೊಳ್ಳುತ್ತಿದ್ದರು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments