Webdunia - Bharat's app for daily news and videos

Install App

ಮಂತ್ರಿಗಿರಿಗಾಗಿ ಮತ್ತೆ ಕಸರತ್ತು ನಡೆಸಿದ ಉಮೇಶ್ ಕತ್ತಿ

Webdunia
ಮಂಗಳವಾರ, 31 ಡಿಸೆಂಬರ್ 2019 (10:43 IST)
ಬೆಂಗಳೂರು : ಸಂಪುಟ ವಿಸ್ತರಣೆಯ ವೇಳೆ ಸಚಿವ ಸ್ಥಾನ ನೀಡುವಂತೆ ಶಾಸಕರು ಮತ್ತೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ  ಒತ್ತಡ ಹೇರುತ್ತಿದ್ದಾರೆ. 



ಹೌದು. ಮಂತ್ರಿಗಿರಿಗಾಗಿ ಪದೇ ಪದೇ ಸಿಎಂ ಬಿಎಸ್ ವೈರನ್ನ ಭೇಟಿಯಾಗ್ತಿರುವ ಉಮೇಶ್ ಕತ್ತಿ ಇದೀಗ ಮತ್ತೆ ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸಕ್ಕೆ ಆಗಮಿಸಿ ಬಿಎಸ್ ವೈ ಜೊತೆ ಚರ್ಚೆ ನಡೆಸಿದ್ದಾರೆ. ಸಿಎಂ ಜತೆ ವಾಕಿಂಗ್ ಗೆ ತೆರಳಿದ ಉಮೇಶ್ ಕತ್ತಿ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನ ಕೊಡುವಂತೆ ಸಿಎಂಗೆ ಒತ್ತಡ ಹೇರಿದ್ದಾರೆ ಎನ್ನಲಾಗಿದೆ.


ಹಾಗೇ ಸಿಎಂ ಬಿಎಸ್ ವೈ ಯ ಧವಳಗಿರಿ ನಿವಾಸಕ್ಕೆ ಮಾಜಿ ಶಾಸಕ ಆರ್.ಶಂಕರ್ ಭೇಟಿ ನೀಡಿದ್ದು,  ಎಂಎಲ್ ಸಿ ಮಾಡಿ ಮಂತ್ರಿ ಮಾಡೋದಾಗಿ ಸಿಎಂ ಹೇಳಿದ್ದ ಹಿನ್ನಲೆಯಲ್ಲಿ ಇದೇ ಕಾರಣಕ್ಕೆ ಸಿಎಂ ಜತೆ ಆರ್.ಶಂಕರ್ ಚರ್ಚೆ ನಡೆಸಿದ್ದಾರೆ. ಹಾಗೇ ಯಡಿಯೂರಪ್ಪ ನಿವಾಸಕ್ಕೆ ಎಂಟಿಬಿ ನಾಗರಾಜ್ ಕೂಡ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments