Select Your Language

Notifications

webdunia
webdunia
webdunia
webdunia

ಸಿಎಂ ನಿವಾಸದಿಂದ ಸಿಟ್ಟಿನಿಂದ ಹೊರಬಂದ ಉಮೇಶ್ ಕತ್ತಿ

ಸಿಎಂ ನಿವಾಸದಿಂದ ಸಿಟ್ಟಿನಿಂದ ಹೊರಬಂದ ಉಮೇಶ್ ಕತ್ತಿ
ಬೆಂಗಳೂರು , ಶನಿವಾರ, 24 ಆಗಸ್ಟ್ 2019 (12:58 IST)
ಬೆಂಗಳೂರು : ಸಚಿವ ಸ್ಥಾನ ಸಿಗದ ಹಿನ್ನಲೆಯಲ್ಲಿ ಹಿರಿಯ ಶಾಸಕ ಉಮೇಶ್‌ ಕತ್ತಿ, ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರ ಎದುರೇ ತಮ್ಮ ಸಿಟ್ಟನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.




ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ತಮಗೆ ಸ್ಥಾನ ಸಿಗದಿರುವ ಕುರಿತು ತೀವ್ರವಾಗಿ ಅಸಮಾಧಾನಗೊಂಡಿರುವ ಹಿರಿಯ ಶಾಸಕ ಉಮೇಶ್‌ ಕತ್ತಿ ಹಾಗೂ ಸಚಿವ ಲಕ್ಷ್ಮಣ ಸವದಿಯವರನ್ನು ಇಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ  ನಿವಾಸಕ್ಕೆ ಕರೆಸಿಕೊಂಡಿದ್ದರು.


ಆದರೆ ಆ ವೇಳೆ ಭೇಟಿ ನೀಡಿದ ಉಮೇಶ್ ಕತ್ತಿ, ಸಚಿವ ಲಕ್ಷ್ಮಣ ಸವದಿಯವರ ವಿರುದ್ದ ಕೂಗಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸಿಟ್ಟಿನಿಂದಲೇ ಹೊರ ಬಂದ ಉಮೇಶ್‌ ಕತ್ತಿ, ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನೆರೆ ಹಾನಿ ಅಧ್ಯಯನಕ್ಕೆಂದು ಇಂದು ರಾಜ್ಯಕ್ಕೆ ಆಗಮಿಸಲಿರುವ ಕೇಂದ್ರ ತಂಡ