Webdunia - Bharat's app for daily news and videos

Install App

ಮದ್ಯವ್ಯಸನಿ ಪತಿಯ ಕಿರುಕುಳ ತಾಳಲಾರದೆ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ ತಾಯಿ

Sampriya
ಬುಧವಾರ, 5 ಮಾರ್ಚ್ 2025 (15:32 IST)
ಬೆಳಗಾವಿ: ಮದ್ಯವ್ಯಸನಿಯಾದ ಪತಿಯ ಕಿರುಕುಳ ತಾಳಲಾರದೇ ಮೂವರು ಮಕ್ಕಳೊಂದಿಗೆ ತಾಯಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲ್ಲೂಕಿನಲ್ಲಿ ಚಿಂಚಲಿಯಲ್ಲಿ ಇಂದು ನಡೆದಿದೆ.

ಆತ್ಮಹತ್ಯೆಗೆ ಶರಣಾದ ತಾಯಿ ಮತ್ತು ಮಕ್ಕಳನ್ನು ಚಿಂಚಲಿ ಪಟ್ಟಣದ ನಿವಾಸಿಗಳಾದ  ಶಾರದಾ ಅಶೋಕ ಡಾಲೆ(32),  ಅಮೃತಾ(14), ಆದರ್ಶ(8) ಮತ್ತು ಅನುಷಾ (5) ಎಂದು ಗುರುತಿಸಲಾಗಿದೆ.

ಎಲ್ಲರ ದೇಹಗಳನ್ನು ನೀರಿನಿಂದ‌ ಹೊರ ತೆಗೆಯಲಾಗಿದೆ.

ಶಾರದಾ ಅವರ ಪತಿ ಅಶೋಕ ಡಾಲೆ ನಿತ್ಯವೂ ಕುಡಿದು ಬಂದು ಪತ್ನಿ ಹಾಗೂ ಮಕ್ಕಳಿಗೆ ಕಿರುಕುಳ
ನೀಡುತ್ತಿದ್ದ. ಇದರಿಂದ ಮನನೊಂದ ಶಾರದಾ ತನ್ನ ಮೂವರು ಮಕ್ಕಳೊಂದಿಗೆ ಸಮೀಪದ‌ ಕೃಷ್ಣ ನದಿಗೆ ಹಾರಿದ್ದರು.

ಗಮನಿಸಿದ ಸ್ಥಳೀಯರು ಒಂದು ಮಗುವನ್ನು ರಕ್ಷಿಸಿ ರಾಯಬಾಗ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅನುಷಾ ಮೃತಪಟ್ಟಳು. ಸ್ಥಳಕ್ಕೆ ಧಾವಿಸಿದ ಕುಡಚಿ ಪೊಲೀಸರು ಪತಿ ಅಶೋಕ ಡಾಲೆ ಅವರನ್ನು ಬಂಧಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments