Webdunia - Bharat's app for daily news and videos

Install App

ಅನಾಕಾಡೆಮಿ ಸಿಇಒ ಗೌರವ್ ಮುಂಜಾಲ್ ಕುಟುಂಬ ಟ್ರಾಕ್ಟರ್ ನಲ್ಲಿ ಸ್ಥಳಾಂತರ

Webdunia
ಮಂಗಳವಾರ, 6 ಸೆಪ್ಟಂಬರ್ 2022 (18:02 IST)
ಸಿಲಿಕಾನ್ ಸಿಟಿ ಭಾಗದಲ್ಲಿ ರಸ್ತೆಗಳು ಜಲಾವೃತವಾಗಿದೆ. ಪ್ರವಾಹಕ್ಕೆ ಒಳಗಾದ ಪ್ರದೇಶದಲ್ಲಿ ಸಿಲುಕಿದ ಜನರನ್ನು ಸ್ಥಳಾಂತರ ಮಾಡಲು ಟ್ರಾಕ್ಟರ್‌ ಅನ್ನು ಬಳಕೆ ಮಾಡಲಾಗುತ್ತಿದೆ. ಟ್ರಾಕ್ಟರ್ ಮೂಲಕ ಜನರ ಸ್ಥಳಾಂತರ ಕಾರ್ಯ ಮಾಡಲಾಗುತ್ತಿದೆ.
ನೀರು ತುಂಬಿರುವ ಕಾರಣದಿಂದಾಗಿ ಹಲವಾರು ಐಟಿ ಉದ್ಯೋಗಿಗಳು ಟ್ರ್ಯಾಕ್ಟರ್‌ಗಳನ್ನು ಬಳಸಿ ಕೆಲಸಕ್ಕೆ ತೆರಳಿದ್ದಾರೆ. ಸೆಪ್ಟೆಂಬರ್ 5 ರಂದು, ಐಟಿ ಉದ್ಯೋಗಿಗಳು ಹೆಚ್ಚಾಗಿ ಟ್ರ್ಯಾಕ್ಟರ್ ಮೂಲಕ ಪ್ರಯಾಣಿಸಿದ್ದಾರೆ.
 
"ನಾವು ನಮ್ಮ ಕಚೇರಿಗೆ ಅಥವಾ ಉದ್ಯೋಗಕ್ಕೆ ಹಲವಾರು ದಿನಗಳ ಕಾಲ ರಜೆಯನ್ನು ಹಾಕಲು ಸಾಧ್ಯವಿಲ್ಲ. ನಾವು ತುಂಬಾ ದಿನಗಳ ಕಾಲ ರಜೆ ಮಾಡುವುದು ನಮ್ಮ ಕೆಲಸದ ಮೇಲೆ ಪರಿಣಾಮವನ್ನು ಉಂಟು ಮಾಡುತ್ತದೆ. ನಾವು ಅದಕ್ಕಾಗಿ 50 ರೂಪಾಯಿ ಪಡೆದು ನಮ್ಮನ್ನು ಆಫೀಸ್‌ಗೆ ಕರೆದೊಯ್ಯುವ ಟ್ರ್ಯಾಕ್ಟರ್‌ಗಳನ್ನು ಕಾಯುತ್ತಿದ್ದೇವೆ," ಎಂದು ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುವ ಮಹಿಳೆಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.
 
ಅನಾಕಾಡೆಮಿ ಸಿಇಒ ಗೌರವ್ ಮುಂಜಾಲ್ ಟ್ವೀಟ್; ಈ ನಡುವೆ ಅನಾಕಾಡೆಮಿ ಸಿಇಒ ಗೌರವ್ ಮುಂಜಾಲ್ ತಮ್ಮ ಕುಟುಂಬವನ್ನು ಟ್ರ್ಯಾಕ್ಟರ್ ಮೂಲಕ ಸ್ಥಳಾಂತರ ಮಾಡುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ತಮ್ಮ ನಿವಾಸ ಇರುವ ಪ್ರದೇಶವು ನೀರಿನಲ್ಲಿ ಮುಳುಗಿರುವ ಕಾರಣದಿಂದಾಗಿ ಗೌರವ್ ಮುಂಜಾಲ್‌ರ ಕುಟುಂಬ ಮತ್ತು ಸಾಕುಪ್ರಾಣಿಗಳನ್ನು ಟ್ರ್ಯಾಕ್ಟರ್‌ನಲ್ಲಿ ಸ್ಥಳಾಂತರಿಸುವ ವೀಡಿಯೊವನ್ನು ಹಂಚಿಕೊಳ್ಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

Air India Plane crash: ವಿಮಾನ ದುರಂತ ವೀಕ್ಷಿಸಿ ರೀಲ್ಸ್ ಮಾಡ್ತೀರಾ, ಸಚಿವ ರಾಮಮೋಹನ್ ನಾಯ್ಡುಗೆ ತರಾಟೆ

Air India plane crash: ವಿಮಾನ ಪತನಕ್ಕೆ ಇದೇ ಕಾರಣನಾ

ಮುಂದಿನ ಸುದ್ದಿ
Show comments