ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗ್ರಂಥಾಲಯದ ಬದಲಿಗೆ ಅನಧಿಕೃತ ಹೋಟೆಲ್‌ ಆರಂಭ, ಹಣ ದುರ್ಬಳಿಗೆ

Webdunia
ಗುರುವಾರ, 5 ಮೇ 2022 (20:50 IST)
ಬೆಂಗಳೂರು: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಂದಾಯ ಇಲಾಖೆಯ ನೌಕರರ ಸಂಘಕ್ಕೆ ನೀಡಲಾದ ಜಾಗದಲ್ಲಿ ಹೋಟೆಲ್‌ ಆರಂಭಿಸಿರುವ ಬಗ್ಗೆ ತಿಳಿದುಬಂದಿದೆ. 
 
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಕಂದಾಯ ಭವನದ ಕಟ್ಟಡದಲ್ಲಿ ಗ್ರಂಥಾಲಯ ತೆರೆಯಲು ಮೀಸಲಿಟ್ಟಿದ್ದ ಜಾಗದಲ್ಲಿ ಹೋಟೆಲ್‌ ಆರಂಭಿಸಲಾಗಿದೆ. ಅನುದಾನ ಬಿಡುಗಡೆ ಮತ್ತು ಇತರ ವಿವರಗಳನ್ನು ಪರಿಶೀಲಿಸಿ ಅನಧಿಕೃತವಾಗಿ ಹೋಟೆಲ್ ತೆರೆದಿದ್ದಲ್ಲಿ ಮುಚ್ಚಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಆಗ್ರಹಿಸಿದ್ದಾರೆ.
 
ಯೋಜನೆ ಮತ್ತು ಶೌಚಗೃಹ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು. ಆದರೆ ಅನಧಿಕೃತವಾಗಿ ಹೋಟೆಲ್ ತೆರೆಯಲಾಗಿದ್ದು, ಗ್ರಂಥಾಲಯ ಆರಂಭಿಸಿದಲ್ಲಿ ಅನುಕೂಲ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
 
7 ವರ್ಷಗಳಿಂದ ಹೋಟೆಲ್:
 
ಜಾಗದಲ್ಲಿ ಕಳೆದ 7 ವರ್ಷಗಳಿಂದ ಹೋಟೆಲ್ ನಡೆಸಲಾಗುತ್ತಿದೆ. ಇದಕ್ಕಾಗಿ ಸಂಸದರ ನಿಧಿಯಿಂದ ಬಿಡುಗಡೆ ಮಾಡಿದ 15 ಲಕ್ಷ ರೂ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಲೋಕಸಭಾ ಸದಸ್ಯರ ಕ್ಷೇತಾಭಿವೃದ್ಧಿ ಯೋಜನೆಯಲ್ಲಿ ಗ್ರಂಥಾಲಯ ಸಿರ್ಮಿಸಲಾಗಿದೆ ಎಂದು ವರದಿ ನೀಡಲಾಗಿದೆ ಎಂದು ಸಾಯಿದತ್ತಾ ಆರೋಪಿಸಿದ್ದಾರೆ.
 
ಗ್ರಂಥಾಲಯ ನಿರ್ಮಿಸದೆ ಹಣ ದುರ್ಬಳಿಗೆ :
 
ಉದ್ದೇಶಿತ ಗ್ರಂಥಾಲಯ ನಿರ್ಮಿಸದೆ ಹಣ ದುರ್ಬಳಿಗೆ ಮಾಡಿಕೊಳ್ಳಲಾಗಿದೆ. ಸಂಸತ್ ಸದಸ್ಯರ ಅನುದಾನದಿಂದ ಮೊದಲ ಕಂತಿನಲ್ಲಿ 2014ರ ಜೂ.24 ರಂದು 7.5 ಲಕ್ಷ ರೂ ಬಿಡುಗಡೆ ಮಾಡಲಾಗಿದೆ. ಸರ್ಕಾರದಿಂದ ಅನುದಾನ ಪಡೆದ ಬಗ್ಗೆ ಸ್ವೀಕೃತಿ ಪತ್ರವನ್ನು ಕಳಿಸುವಂತೆ ನೋಟಿಸ್ ನೀಡಿದರೂ ಅಧಿಕಾರಿಗಳು ಪ್ರತಿಕ್ರಿಯಿಸಿಲ್ಲ. ಅಂದರೆ ಮೊದಲ ಹಂತದ ಕಾಮಗಾರಿ ವೇಳೆಯೇ ಇಲ್ಲಿ ಗ್ರಂಥಾಲಯ ನಿರ್ಮಿಸಲಾಗಿತ್ತು ಎಂದು ವರದಿ ಬಿಡುಗಡೆ ಮಾಡಲಾಗಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

ಇವರಿಗಿಂತ, ಇಂದಿರಾ ಗಾಂಧಿಗೆ ಧೈರ್ಯ ಜಾಸ್ತಿಯಾಗಿತ್ತು: ರಾಹುಲ್ ಗಾಂಧಿ ಕಿಡಿ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

ಮುಂದಿನ ಸುದ್ದಿ
Show comments