Webdunia - Bharat's app for daily news and videos

Install App

ಸಾಲಮನ್ನಾ ವಿಷಯದಲ್ಲಿ ಯು ಟರ್ನ್ ಮಾಡುವುದಿಲ್ಲ - ಸುದ್ದಿಗೋಷ್ಟಿಯಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭರವಸೆ

Webdunia
ಬುಧವಾರ, 23 ಮೇ 2018 (20:21 IST)
ಬೆಂಗಳೂರು : ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿ ಬುಧವಾರ (ಇಂದು) ಪ್ರಮಾನ ವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮೊದಲ  ಸುದ್ದಿಗೋಷ್ಟಿ ನಡೆಸಿದ್ದಾರೆ.


ಈ ಸಂದರ್ಭದಲ್ಲಿ ಅವರು ರೈತರ ಸಾಲಮನ್ನಾ ಬಗ್ಗೆ ಉಲ್ಟಾ ಹೊಡೆದಿದ್ದಾರೆ ಎಂದು ಕೆಲವರು ಹೇಳಿರುವುದಕ್ಕೆ ಸ್ಪಷ್ಟನೆ ನೀಡಿದ್ದಾರೆ. ‘ಸಾಲಮನ್ನಾ ಬಗ್ಗೆ ಯು ಟರ್ನ್ ಅಂತ ಕೆಲವರು ಹೇಳಿದ್ದಾರೆ. ನಮಗೆ ಬಹುಮತ ಬಂದ್ರೆ 24 ಗಂಟೆಗಳಲ್ಲಿ ಸಾಲಮನ್ನಾ ಮಾಡುತ್ತೇನೆ ಅಂತ ನಾನು ಹೇಳಿದ್ದು ನಿಜ. ಆದರೆ ಈಗ ಸಮ್ಮಿಶ್ರ ಸರ್ಕಾರ ಬಂದಿದೆ. ನಾನು ಏಕಾಏಕಿ ನಿರ್ಧಾರ ಪ್ರಕಟ ಮಾಡಿದರೆ ಸರಿಯಲ್ಲ. ಮಿತ್ರ ಪಕ್ಷದ ಜೊತೆ ಚರ್ಚಿಸಿ ಸಾಲಮನ್ನಾ ಬಗ್ಗೆ ತೀರ್ಮಾನ ಮಾಡುವೆ. ರೈತರ ಸಾಲಮನ್ನಾ ಹೇಗೆ ಮಾಡಬೇಕೆಂಬ ಬ್ಲೂ ಪ್ರಿಂಟ್ ಒಂದನ್ನು ನಾನು ಈಗಾಗ್ಲೆ ಸಿದ್ಧಪಡಿಸಿದ್ದೇನೆ. ಅವರಿಗೂ ಬೇಸರವಾಗದಂತೆ ನಾನು ಕ್ರಮ ಕೈಗೊಳ್ತೇನೆ. ಸಾಲಮನ್ನಾ ವಿಷಯದಲ್ಲಿ ಯು ಟರ್ನ್ ಮಾಡುವುದಿಲ್ಲ ಎಂದು  ಸುದ್ದಿಗೋಷ್ಟಿಯಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments