Select Your Language

Notifications

webdunia
webdunia
webdunia
webdunia

ಮುಂಬೈ ರೆಸಾರ್ಟ್ ನತ್ತ ಅತೃಪ್ತ ಶಾಸಕರ ಪ್ರಯಾಣ?

ಮುಂಬೈ ರೆಸಾರ್ಟ್ ನತ್ತ ಅತೃಪ್ತ ಶಾಸಕರ ಪ್ರಯಾಣ?
ಬೆಂಗಳೂರು , ಶನಿವಾರ, 6 ಜುಲೈ 2019 (18:15 IST)
ಮೈತ್ರಿ ಪಕ್ಷಗಳು ಹಾಗೂ ಬಿಜೆಪಿ ನಡುವೆ ಈಗ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಆಟ ಶುರುವಾಗಿದ್ದು, ರಾಜ್ಯದ ರಾಜಕೀಯದಲ್ಲಿ ಮತ್ತೆ ರೆಸಾರ್ಟ್ ರಾಜಕೀಯ ನುಸುಳಿದೆ.

ಕಾಂಗ್ರೆಸ್ – ಜೆಡಿಎಸ್ ನ 12ಕ್ಕೂ ಹೆಚ್ಚು ಶಾಸಕರು ಬೆಂಗಳೂರಿನಿಂದ ಮುಂಬೈಗೆ ಪ್ರಯಾಣ ಬೆಳೆಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ಕಾಂಗ್ರೆಸ್ – ಜೆಡಿಎಸ್ ನಿಂದ ಒಟ್ಟು 12 ಶಾಸಕರು ರಾಜೀನಾಮೆ ನೀಡಿದ್ದು, ಅವರನ್ನೆಲ್ಲ ಮುಂಬೈಗೆ ಕಳಿಸಲು ಸಿದ್ಧತೆ ನಡೆಯುತ್ತಿದೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರಕಾರವಿದೆ. ಹೀಗಾಗಿ ಅಲ್ಲಿಗೆ ಇಲ್ಲಿನ ಅತೃಪ್ತ ಶಾಸಕರನ್ನು ಕಳಿಸಿದರೆ ಅವರನ್ನು ಸೆಳೆಯಲು ಬೇರೆಯವರಿಗೆ ಸಾಧ್ಯವಾಗುವುದಿಲ್ಲ ಎಂಬ ಲೆಕ್ಕಾಚಾರ ಇದೆ.

ಈ ನಡುವೆ, ಕಾಂಗ್ರೆಸ್ – ಜೆಡಿಎಸ್ ಶಾಸಕರನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಹಾಗೂ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಕಾರಣದಿಂದಲೇ ರಾಜೀನಾಮೆ ನೀಡಬೇಕಾಗಿದೆ. ಜನರ ನಿರೀಕ್ಷೆಗಳನ್ನು ತಲುಪಲು ವಿಫಲವಾದ ಕಾರಣದಿಂದಲೇ ರಾಜೀನಾಮೆ ನೀಡಿದ್ದಾಗಿ ಹೆಚ್.ವಿಶ್ವನಾಥ್ ಹೇಳಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

‘ಅನೈತಿಕ ಸಂಬಂಧ ಹಳಸಿದ್ದಕ್ಕೆ ಸರಕಾರ ಬೀಳುತ್ತಿದೆ’