‘ಸಮವಸ್ತ್ರ ಪಾಲನೆ ಮಾಡಬೇಕು’

Webdunia
ಗುರುವಾರ, 13 ಅಕ್ಟೋಬರ್ 2022 (15:53 IST)
ಕಂದಾಯ ಸಚಿವ R.ಅಶೋಕ್ ಹಿಜಾಬ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ಬಗ್ಗೆ ಸರ್ಕಾರದ ನಿಲುವಿನಲ್ಲಿ ಬದಲಾವಣೆ ಇಲ್ಲ, ಸರ್ಕಾರಿ ಶಾಲೆಗೆ ಬರುವವರು ಸಮವಸ್ತ್ರ ಪಾಲನೆ ಮಾಡಬೇಕು. ಇದು ಸರ್ವಪಾಲನಾ ನಿಯಮವಾಗಿದೆ ಎಂದು ತಿಳಿಸಿದ್ರು. ಈ ನಿಯಮದ ವಿರುದ್ಧವಾಗಿ ಕೆಲವು ವಿದ್ಯಾರ್ಥಿಗಳು ಹೈಕೋರ್ಟ್​​​​ಗೆ ಹೋಗಿದ್ದರು. ಆದರೆ ಹೈಕೋರ್ಟ್ ತೀರ್ಪು ಸರ್ಕಾರದ ಪರವಾಗಿ ಬಂದಿತ್ತು. ಇದೀಗ ಸುಪ್ರೀಂ ಕೋರ್ಟ್​​​​ನಲ್ಲಿ ಭಿನ್ನ ತೀರ್ಪು ಬಂದಿದೆ. ಈಗ ಪ್ರಕರಣ ಸಿಜೆ ಬೆಂಚ್​​ಗೆ ವರ್ಗಾವಣೆ ಆಗಿದೆ. ಅಲ್ಲಿ ಕೂಡ ಸರ್ಕಾರದ ನಿಲುವು ಹಿಜಾಬ್​​​ ವಿರುದ್ಧವೇ ಆಗಿರುತ್ತದೆ ಎಂದ್ರು. ವಿದ್ಯಾರ್ಥಿಗಳು ಮನೆಯಲ್ಲಿ ಏನು ಬೇಕಾದರೂ ವಸ್ತ್ರ ಹಾಕಲಿ, ಆದರೆ ಶಾಲೆಗೆ ಬರುವಾಗ ಸಮವಸ್ತ್ರ ಕಡ್ಡಾಯವಾಗಿದೆ. ಖಾಸಗಿ ಶಾಲೆಗಳಲ್ಲಿ ಸಮವಸ್ತ್ರ ಕೋಡ್ ಇದೆ ಅದರ ಪಾಲನೆ ನಡೆಯುತ್ತಿದೆ. ಇರಾನ್​​ನಲ್ಲಿ ಏನು ನಡೆಯುತ್ತಿದೆ, ಅಲ್ಲಿ ಮಹಿಳೆಯರು ಹಿಜಾಬ್ ಕಿತ್ತು ಬಿಸಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನ್ಯೂ ಇಯರ್, ಈ ವರ್ಷ ದಾಖಲೆ ಪ್ರಮಾಣದಲ್ಲಿ ಮದ್ಯ ಮಾರಾಟದಲ್ಲಿ ಭರ್ಜರಿ ಆದಾಯ

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ, ರಾಜ್ಯಪಾಲರಿಗೆ ದೂರು: ಎಸ್ ಆರ್ ವಿಶ್ವನಾಥ್

ಭಾರತ, ಪಾಕಿಸ್ತಾನ ವಶದಲ್ಲಿರುವ ಕೈದಿಗಳ, ಮೀನುಗಾರರ ಪಟ್ಟಿ ವಿನಿಮಯ

ಸ್ವಿಟ್ಜರ್ಲೆಂಡ್‌ನ: ಬಾರ್ ಬೆಂಕಿ ಅವಘಡದಲ್ಲಿ 100ಕ್ಕೂ ಅಧಿಕ ಮಂದಿಗೆ ಗಾಯ,‌ ಹೆಚ್ಚುತ್ತಲೇ ಇದೆ

ವರುಣನ ಆಗಮನದೊಂದಿಗೆ ಮೊದಲ ವರ್ಷವನ್ನು ಸ್ವಾಗತಿದ ಮುಂಬೈ

ಮುಂದಿನ ಸುದ್ದಿ
Show comments