ಸಾರಿಗೆ ನಿಗಮ ನೌಕಕರಿಂದ ಸಮವಸ್ತ್ರ ಉಲ್ಲಂಘನೆ

Webdunia
ಶನಿವಾರ, 11 ಜೂನ್ 2022 (19:19 IST)
ಹಿಜಾಬ್‌ನಿಂದ ಆರಂಭವಾದ ಧರ್ಮ ಸಂಘರ್ಷ ರಾಜ್ಯದಲ್ಲಿ ಮುಂದುವರೆಯುತ್ತಲೇ ಇದೆ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬರುತ್ತಿದ್ದರು. ಇದನ್ನು ವಿರೋಧಿಸಿದ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿ ಪ್ರತಿಭಟಿಸಿದ್ದರು. ಈ ನಡುವೆ ಇದೀಗ ಸರ್ಕಾರಿ ನಿಗಮದಲ್ಲೂ ಧರ್ಮ ದಂಗಲ್ ಆರಂಭವಾಗಿದೆ. ಬಿಎಂಟಿಸಿ ಸಾರಿಗೆ ನಿಗಮ ನೌಕರರು ಸಮವಸ್ತ್ರ ನೀತಿ ಉಲ್ಲಂಘನೆ ಮಾಡಿದ್ದು, ಮುಸ್ಲಿಂ ನೌಕರರು ಟೋಪಿ, ಹಿಂದೂ ನೌಕರರಿಂದ ಕೇಸರಿ ಶಾಲು ಧರಿಸಿ ಕೆಲಸಕ್ಕೆ ಹಾಜರಾಗಿದ್ದಾರೆ. ಬಿಎಂಟಿಸಿ ನೌಕರರು ಕಳೆದ 1 ತಿಂಗಳಿಂದ ಕೇಸರಿ ಶಾಲು ಮತ್ತು ಟೋಪಿ ಹಾಕಿಕೊಂಡು ಕೆಲಸಕ್ಕೆ ಹಾಜರಾಗುತ್ತಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಟೋಪಿ ಕಳಚಲು ಕೇಸರಿ ಕಾರ್ಮಿಕರ ಸಂಘ ಎಂದು ನೌಕರರು ಸಂಘ ಮಾಡಿಕೊಂಡಿದ್ದಾರೆ. 1,500 ಸಿಬ್ಬಂದಿ ಕೇಸರಿ ಕಾರ್ಮಿಕರ ಸಂಘದ ಸದಸ್ಯತ್ವ ಹೊಂದಿದ್ದಾರೆ. ಟೋಪಿ ಕಳಚುವವರಗೂ ಕೇಸರಿ ಶಾಲು ಹಾಕುತ್ತೇವೆಂದು ಪಟ್ಟು ಹಿಡಿದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ನಾಳೆ ಲಾಲ್‌ ಕ್ವಿಲಾ ಮೆಟ್ರೋ ನಿಲ್ದಾಣ ಬಂದ್‌

ದೆಹಲಿ ಕಾರು ಸ್ಫೋಟ: ಅಮಿತ್ ಶಾ ರಾಜೀನಾಮೆಗೆ ಹೆಚ್ಚಿದ ಒತ್ತಾಯ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಳಿಗೆ, ಏನೆಲ್ಲಾ ಸಿಗಲಿದೆ ಗೊತ್ತಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಮುಂದಿನ ಸುದ್ದಿ
Show comments