Publish Date: Sat, 21 Apr 2018 (18:37 IST)
Updated Date: Sat, 21 Apr 2018 (18:40 IST)
ಬೆಂಗಳೂರು : ಪಕ್ಷದಿಂದ ಪಕ್ಷಕ್ಕೆ, ಕ್ಷೇತ್ರದಿಂದ ಕ್ಷೇತ್ರವನ್ನು ಬದಲಿಸುವ ಸಿದ್ದರಾಮಯ್ಯ ಅವಕಾಶವಾದಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,’ ಸಿಎಂ ಸಿದ್ದರಾಮಯ್ಯ ಅವರು ಬಾದಾಮಿಯನ್ನು 2 ನೇ ಕ್ಷೇತ್ರವಾಗಿ ಆಯ್ಕೆ ಮಾಡಿಕೊಂಡು ಸ್ಪರ್ಧಿಸಲು ಪ್ರಯತ್ನಿಸುವ ಮೂಲಕ ವಲಸೆ ಹಕ್ಕಿ ಆಗಿದ್ದಾರೆ. ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಜನರ ಆಕ್ರೋಶದಿಂದ ತಪ್ಪಿಸಿಕೊಳ್ಳಲು ಆಗುವುದಿಲ್ಲ. ಎರಡು ಕಡೆ ಸ್ಪರ್ಧಿಸಿದರೂ ಎರಡು ಕಡೆಯೂ ಸೋಲುತ್ತಾರೆ. ಮೈಸೂರು ಮಾದರಿಯ ಕರ್ನಾಟಕ ವೈಭವ ಮತ್ತೆ ಮರಳಲು ಪ್ರಗತಿಯ ಕಾರ್ಯಸೂಚಿ ಹೊಂದಿದೆ. ಸ್ವಂತ ಶಕ್ತಿ ಮೇಲೆ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ