Webdunia - Bharat's app for daily news and videos

Install App

ಭ್ರಷ್ಟಾಚಾರದ ಸರ್ಕಾರ ಕೊಡ್ತೇವೆ ಎಂದು ಮೋದಿ ಹೇಳಿದ್ದಾರೆ: ಡಿವಿಎಸ್ ಎಡವಟ್ಟು

Webdunia
ಗುರುವಾರ, 2 ನವೆಂಬರ್ 2017 (14:32 IST)
ಬೆಂಗಳೂರು: ಬಿಜೆಪಿ ಪರಿವರ್ತನಾ ಯಾತ್ರೆಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ದೀಪ ಬೆಳಗಿಸುವ ಮೂಲಕ ಯಾತ್ರೆಗೆ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೀಶ್ವರ್, ಬಿಎಸ್ಆರ್ ಪಕ್ಷದ ಶಾಸಕ ಕುಡುಚಿ ರಾಜೀವ್, ಗಿರಯ್ಯ ಪಾಟೀಲ್ ಅಮಿತ್ ಷಾ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಯಾದರು.

ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಅಮಿತ್ ಷಾ ರಾಜ್ಯ ನಾಯಕರ ವಿರುದ್ಧ ಗುಡುಗಿದರು. ಹೀಗಾಗಿ ಕೆಲಕಾಲ ರಾಜ್ಯನಾಯಕರು ದಿಕ್ಕಪಾಲದರು. ವೇದಿಕೆಯಿಂದ ಕೆಳಗಿಳಿದ ಶಾಸಕರು, ಕುರ್ಚಿ ಭರ್ತಿ ಮಾಡಲು ಹರಸಾಹಸ ಪಟ್ಟರು.

ಆದರೆ ಪರಿವರ್ತನಾ ಯಾತ್ರೆ ಉದ್ಘಾಟನೆಗೂ ಬರದೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅಂತರ ಕಾಯ್ದುಕೊಂಡರು.

ಇನ್ನು ಇದೇವೇಳೆ ಭಾಷಣ ಮಾಡುತ್ತಿರುವಾಗ ಕೇಂದ್ರ ಸಚಿವ ಸದಾನಂದ ಗೌಡರು ಆತುರಾತುರದ ಭಾಷಣ ಮಾಡಲು ಹೋಗಿ ದೊಡ್ಡ ಎಡವಟ್ಟು ಮಾಡಿಕೊಂಡರು. ಕರ್ನಾಟಕದಿಂದ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಬೇಕು ಎಂದ ಅವರು `ಭ್ರಷ್ಟಾಚಾರದ ಸರ್ಕಾರ ಕೊಡ್ತೇವೆ ಎಂದು ಮೋದಿ ಹೇಳಿದ್ರು’ ಎನ್ನುವ ಮೂಲಕ ತಪ್ಪಾಗಿ ಹೇಳಿ ಅಪಹಾಸ್ಯಕ್ಕೀಡಾದರು.

ಸಿದ್ದರಾಮಯ್ಯ ಅವರೇ, ಅಶ್ವಮೇಧ ಕುದುರೆಯನ್ನು ಬಿಟ್ಟಿದ್ದೇವೆ. 2018 ಚುನಾವಣೆಯಲ್ಲಿ ನಿಮ್ಮನ್ನು ಮೈಸೂರಿಗೆ ಕಳುಹಿಸ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments