ಗೌರಿ ಹಬ್ಬದಂದು ಪುತ್ರನಿಗೆ ಎಚ್‌ಎಂಟಿ ವಾಚ್ ಕಟ್ಟಿದ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ

Sampriya
ಶುಕ್ರವಾರ, 6 ಸೆಪ್ಟಂಬರ್ 2024 (16:22 IST)
Photo Courtesy X
ಬೆಂಗಳೂರು: ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಎಚ್‌ಎಂಟಿ  ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಮುಂದಾಗಿದ್ದಾರೆ.  ಇದೀಗ ಗೌರಿ ಹಬ್ಬದ ಶುಭ ದಿನದಂದು ಪುತ್ರ ನಿಖಿಲ್‌ಗೆ ಎಚ್‌ಎಂಟಿ ವಾಚ್ ಗಿಫ್ಟ್ ನೀಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ನಿಖಿಲ್ ಕುಮಾರಸ್ವಾಮಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಪೋಸ್ಟ್‌ನಲ್ಲಿ ಹೀಗಿದೆ:  HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು.

ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ಪೂಜ್ಯ ತಂದೆಯವರು ಹಾಗೂ ಕೇಂದ್ರ ಸರಕಾರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವರಾದ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನವಾದ ಇಂದು HMT ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದರು. ಈ ಸಂದರ್ಭದಲ್ಲಿ HMT ಅಧ್ಯಕ್ಷ, ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಕೋಹ್ಲಿ ಇನ್ನಿತರೆ ಹಿರಿಯ ಅಧಿಕಾರಿಗಳು ಹಾಜರಿದ್ದರು.

ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ.

ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments