Webdunia - Bharat's app for daily news and videos

Install App

ಕೇಂದ್ರ ರೈಲು ಮಂತ್ರಿ ಸುರೇಶ ಅಂಗಡಿ ಕನ್ನಡ ವಿರೋಧಿ

Webdunia
ಬುಧವಾರ, 19 ಜೂನ್ 2019 (15:50 IST)
ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸುವಾಗ ಕನ್ನಡವನ್ನು ಕಡೆಗಣಿಸಿ ಇಂಗ್ಲೀಷಿಗೆ ಮಣೆಹಾಕಿದ ಕೇಂದ್ರ ರೈಲು ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ.

ಬೆಳಗಾವಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು  ತೀವ್ರ ಪ್ರತಿಭಟನೆ ನಡೆಸಿ ಸಂಸದ ಸುರೇಶ್ ಅಂಗಡಿಯವರ ಪ್ರತಿಕೃತಿಯನ್ನು ದಹಿಸಿದರು.

ಬೆಳಗಾವಿಯ ಕ್ಲಬ್ ರಸ್ತೆಯಲ್ಲಿ ಧರಣಿ ನಡೆಸಿದ ಕರವೇ ಕಾರ್ಯಕರ್ತರು, ಅಂಗಡಿಯವರ ವಿರುದ್ಧ ಘೋಷಣೆಗಳನ್ನು ಕೂಗಿದರಲ್ಲದೇ ಪ್ರತಿಕೃತಿಯನ್ನು ದಹಿಸಿದರು.

ಕರವೇ ಜಿಲ್ಲಾಧ್ಯಕ್ಷ ಮಹಾದೇವ ತಳವಾರ, ಯುವ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ, ಗಣೇಶ ರೋಖಡೆ ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ರು.

ಮೇ 23 ಕ್ಕೆ ಲೋಕಸಭೆಗೆ ನಾಲ್ಕನೇ ಬಾರಿ ಆಯ್ಕೆಗೊಂಡ ಸುರೇಶ ಅಂಗಡಿ ಅವರು ಮೇ 30 ರಂದು ರೈಲು ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 17 ರಂದು ಸಂಸದರಾಗಿ ಇಂಗ್ಲೀಷಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕರ್ನಾಟಕದ 28 ರ ಪೈಕಿ 27 ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದು ಈ ಪೈಕಿ ಅಂಗಡಿಯವರೊಬ್ಬರೇ ಇಂಗ್ಲೀಷಿನಲ್ಲಿ ಸ್ವೀಕರಿಸಿದರು.  25 ಸದಸ್ಯರು ಕನ್ನಡದಲ್ಲಿ ಹಾಗೂ ಒಬ್ಬರು ಸಂಸ್ಕೃತದಲ್ಲಿ ಸ್ವೀಕರಿಸಿದ್ದಾರೆ.

ಸುರೇಶ ಅಂಗಡಿಯವರ " ಮರಾಠಿಗರ ಓಲೈಕೆ" ರಾಜಕಾರಣ ಕನ್ನಡ ಸಂಘ ಸಂಸ್ಥೆಗಳ ಆಕ್ರೋಶಕ್ಕೆ ಕಾರಣವಾಗಿದ್ದು,  ಸಾಮಾಜಿಕ ಜಾಲತಾಣದಲ್ಲೂ ಸಾಕಷ್ಟು ಕಟು ಟೀಕೆಗಳು ವ್ಯಕ್ತವಾಗಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments