Webdunia - Bharat's app for daily news and videos

Install App

ವಿಶಿಷ್ಟ ಪತ್ರಿಕಾ ದಿನಾಚರಣೆ

Webdunia
ಬುಧವಾರ, 4 ಜುಲೈ 2018 (17:10 IST)
ಚಿಕ್ಕೋಡಿ ಮಾಧ್ಯಮ ಮಿತ್ರರು ಸೇರಿಕೊಂಡು ವಿಶಿಷ್ಟವಾಗಿ ಪತ್ರಿಕಾ ದಿನಾಚರಣೆಯನ್ನ ಆಚರಿಸಿದರು. ಪತ್ರಿಕಾ ದಿನಾಚರಣೆ ನಿಮಿತ್ಯ ಚಿಕ್ಕೋಡಿ ಪಟ್ಟಣದ ಶಾಸಕರ ಸರಕಾರಿ ಮಾದರಿ ಶಾಲೆಯಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ  ಸರಕಾರಿ ಪ್ರಾಥಮಿಕ ಶಾಲೆಯ 365 ಬಡ ವಿದ್ಯಾರ್ಥಿಗಳಿಗೆ ಕಂಪಾಸ್ ಬಾಕ್ಸಗಳನ್ನ ಹಂಚುವದರ ಮೂಲಕ ಪತ್ರಿಕಾ ದಿನಾಚರಣೆಯನ್ನ ಆಚರಿಸಲಾಯಿತು.

ಚಿಕ್ಕೋಡಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಜಿ.ದಾಸರ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಮಕ್ಕಳಿಗೆ ಕಂಪಾಸ್ ಬಾಕ್ಸಗಳನ್ನ ವಿತರಿಸಿದರು. ಪತ್ರಿಕಾ ದಿನಾಚರಣೆ ನಿಮಿತ್ಯ ಪತ್ರಕರ್ತರು ಸೇರಿ ಸಂಗ್ರಹಿಸಿ ಬಡ ಮಕ್ಕಳಿಗೆ ಕಂಪಾಸ ಬಾಕ್ಸ್ ಹಂಚಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಿಕ್ಕೋಡಿ ಡಿಡಿಪಿಐ ಎಂ.ಜಿ.ದಾಸರ ಅವರು ಚಿಕ್ಕೋಡಿ ಪತ್ರಕರ್ತರೆಲ್ಲ ಸೇರಿ ಬಡ ಮಕ್ಕಳಿಗಾಗಿ ಹಣ ಸಂಗ್ರಹಿಸಿ ಕಂಪಾಸ್ ಬಾಕ್ಸ್ ನೀಡಿದ್ದು ನಿಜಕ್ಕೂ ಶ್ಲಾಘನೀಯ. ಸಮಾಜ ಒಳಿತು ಕೆಡುಕುಗಳನ್ನ ಜಗತ್ತಿಗೆ ತೋರಿಸುವ ಪತ್ರಕರ್ತರು ತಮ್ಮ ಒತ್ತಡದ ಜೀವನದ ಮಧ್ಯೆಯೂ ಸಮಾಜದ ಅಭಿವೃದ್ಧಿಗಾಗಿ ತೋರಿರುವ ಕಳಕಳಿ ಬೇರೆ ಅವರಿಗೂ ಮಾದರಿಯಾಗಿದೆ ಎಂದರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments