ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರಿಗೆ ಅನುಕೂಲ ಕಲ್ಪಿಸುವುದಕ್ಕಾಗಿ ಪಿಎಚ್ಡಿ ಪ್ರವೇಶ ಪರೀಕ್ಷೆ ನಿಯಮಾವಳಿಗೆ ತಿದ್ದುಪಡಿ ಮಾಡಲಾಗಿದೆ ಎಂಬ ಕೂಗು ಕೇಳಿಬಂದಿರುವ ಹಿನ್ನೆಲೆಯಲ್ಲಿ ಹಳೇ ನಿಯಮದಂತೆ ಮುಕ್ತ ವಿವಿ ಪಿಎಚ್ಡಿ ಪರೀಕ್ಷೆ ಮಾಡುವುದಕ್ಕೆ ಸಿಂಡಿಕೇಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತವಿವಿ ಪಿಎಚ್ಡಿ ಪರೀಕ್ಷೆ ಪ್ರವೇಶ ನಿಯಮಾವಳಿಗೆ ತಿದ್ದುಪಡಿಯನ್ನು ರದ್ದುಮಾಡಲಾಗಿದೆ. ಹಳೇ ನಿಯಮದಂತೆ ಪ್ರವೇಶ ಪರೀಕ್ಷೆಯನ್ನು ಮಾಡಲಾಗುತ್ತದೆ ಎಂದು ಸಿಂಡಿಕೇಟ್ ಸದಸ್ಯ ಗೋ. ಮದುಸೂದನ್ ಹೇಳಿಕೆ ನೀಡಿದರು.
ಪಿಎಚ್ಡಿ ಪ್ರವೇಶ ಪರೀಕ್ಷೆ ಪ್ರವೇಶ ಪರೀಕ್ಷೆಗೆ 50 ಅಂಕಗಳನ್ನು ನಿಗದಿಗೊಳಿಸಲಾಗಿತ್ತು. ಆದರೆ ಸಚಿವೆ ಉಮಾಶ್ರೀ ಅವರಿಗೆ 43 ಅಂಕಗಳು ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಈ ನಿಯಮಾವಳಿ ತಿದ್ದುಪಡಿ ಮಾಡಿ ಕನಿಷ್ಠ 40 ಅಂಕಗಳಿಗೆ ಇಳಿಸಲಾಗಿದೆ ಎಂಬ ದೂರು ಕೇಳಿಬಂದಿತ್ತು. ನವೆಂಬರ್ ನಾಲ್ಕರಂದು ಪಿಎಚ್ಡಿ ಪ್ರವೇಶ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಯಿತು.
ಆದರೆ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯ ನವೆಂಬರ್ 25ರಂದು ಪ್ರಕಟಣೆ ನೀಡಿ ಪಿಎಚ್ಡಿ ಪ್ರವೇಶ ಪರೀಕ್ಷೆಗೆ ಗರಿಷ್ಠ ಅಂಕಗಳನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 50ರಿಂದ 40ಕ್ಕೆ ಇಳಿಸಿತು. ತರುವಾಯ ಉಮಾಶ್ರೀ ವೈಯಕ್ತಿಕ ಪರೀಕ್ಷೆಗೆ ಹಾಜರಾಗಿದ್ದರು. ಉಮಾಶ್ರೀ ಅವರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಅಂಕಗಳನ್ನು ಇಳಿಸಲಾಗಿದೆ ಎಂಬ ಕೂಗು ಕೇಳಿಬಂದಿತ್ತು.