Webdunia - Bharat's app for daily news and videos

Install App

ಅತ್ಯಾಚಾರ ಸಂತ್ರಸ್ತೆಗೆ ನಿಯಮಬಾಹಿರವಾಗಿ ಗರ್ಭಪಾತ; ಯಲಹಂಕ ಸರಕಾರಿ ಆಸ್ಪತ್ರೆಯ ವಿರುದ್ಧ ದೂರು ದಾಖಲು

Webdunia
ಬುಧವಾರ, 2 ಜನವರಿ 2019 (07:32 IST)
ಬೆಂಗಳೂರು : ಅತ್ಯಾಚಾರ ಸಂತ್ರಸ್ತೆಗೆ ನಿಯಮಬಾಹಿರವಾಗಿ ಗರ್ಭಪಾತ ಮಾಡಿಸಿರುವುದಕ್ಕೆ ಯಲಹಂಕ ಸರಕಾರಿ ಆಸ್ಪತ್ರೆಯ ವೈದ್ಯರ ವಿರುದ್ಧ ರಾಜ್ಯ ಮಹಿಳಾ ಹಕ್ಕು ಆಯೋಗ  ಗೃಹ ಇಲಾಖೆಗೆ ದೂರು ನೀಡಿದೆ.


ಐದು ತಿಂಗಳ ಗರ್ಭವತಿಯಾಗಿದ್ದ 15 ವರ್ಷದ ಬಾಲಕಿಗೆ ಡಿ.2ರಂದು ಯಲಹಂಕ ಸರಕಾರಿ ವೈದ್ಯರಾದ ಡಾ.ರಾಮಚಂದ್ರ ಅವರು ಗರ್ಭಪಾತ ಮಾಡಿಸಿದ್ದರು. ಈ ವೇಳೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿರುವ ಆರೋಪಿಯನ್ನೂ ಇನ್ನೂ ಬಂಧಿಸಿರಲಿಲ್ಲ. ಹೀಗಾಗಿ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಬೇಕಾಗಿತ್ತು. ಆದರೆ, ವೈದ್ಯರು ಎಲ್ಲ ನಿಯಮಗಳನ್ನು ಮೀರಿ ಆಕೆಗೆ ಗರ್ಭಪಾತ ಮಾಡಿಸಿದ್ದಾರೆ. ಹೀಗಾಗಿ ವೈದ್ಯರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿಬಾಯಿ ನಗರ ಪೊಲೀಸ್‌ ಕಮಿಷನರ್‌ ಹಾಗೂ ಗೃಹ ಇಲಾಖೆಗೆ ದೂರು ನೀಡಿದ್ದಾರೆ.


ಯಲಹಂಕ ಸರಕಾರಿ ಆಸ್ಪತ್ರೆಯಲ್ಲಿ ಹೆರಿಗೆಗೆ ಬರುವವರಿಂದ ವೈದ್ಯ ಡಾ. ರಾಮಚಂದ್ರ ಅವರು 15ರಿಂದ 20 ಸಾವಿರ ರೂ. ಪಡೆಯುತ್ತಾರೆ ಎಂದು ಆರೋಪಿಸಿ ಆಸ್ಪತ್ರೆ ಎದುರು ಇತ್ತೀಚೆಗೆ ಪ್ರತಿಭಟನೆ ನಡೆದಿತ್ತು. ಈ ಬಗ್ಗೆ ದಾಖಲೆಗಳನ್ನು ಪರಿಶೀಲನೆ ನಡೆಸಲು ಮಹಿಳಾ ಆಯೋಗದ ಅಧ್ಯಕ್ಷರು ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಈ ವಿಚಾರ ಬೆಳಕಿಗೆ ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments