Webdunia - Bharat's app for daily news and videos

Install App

ನೀರಿನ ಕ್ಯಾನ್ ನಲ್ಲಿ ಜೀವಂತ ಮೊಸಳೆ ಮರಿಗಳ ಅಕ್ರಮ ಮಾರಾಟ ಯತ್ನ

Webdunia
ಶುಕ್ರವಾರ, 10 ಡಿಸೆಂಬರ್ 2021 (14:42 IST)
ಬೆಂಗಳೂರು: ಜೀವಂತ ಮೊಸಳೆ ಮರಿಯೊಂದನ್ನು ಇಟ್ಟುಕೊಂಡು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ನಗರದ ದಕ್ಷಿಣ ವಿಭಾಗದ ಚನ್ನಮನ ಕೆರೆ ಅಚ್ಚುಕಟ್ಟು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
 
ಜಯನಗರದ ಅಬ್ದುಲ್ ಖಾಲಿದ್ ಹಾಗೂ ರಾಮನಗರದ ಬೂದಿಗುಪ್ಪೆಯ ಬಿ.ಎಸ್.ಗಂಗಾಧರ್ ಬಂಧಿತರು. ಆರೋಪಿಗಳಿಂದ ಜೀವಂತ ಮೊಸಳೆ ಮರಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
ಆರೋಪಿಗಳಿಬ್ಬರೂ ನೀರಿನ ಕ್ಯಾನ್‌ನಲ್ಲಿ ಜೀವಂತ ಮೊಸಳೆ ಮರಿ ಇರಿಸಿಕೊಂಡು ಬಂದಿದ್ದರು. ಇವರು ಸಿಕೆ ಅಚ್ಚುಕಟ್ಟು ಠಾಣೆ ವ್ಯಾಪ್ತಿಯ ಈಶ್ವರಿ ಥಿಯೇಟರ್ ಕಟ್ಟಡದ ಕೆಳಭಾಗದಲ್ಲಿ ನಿಂತು ಆ ಮೊಸಳೆ ಮರಿಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಗಳನ್ನು ಬಂಧಿಸಿ ಇಬ್ಬರ ವಿರುದ್ಧ ವನ್ಯ ಜೀವಿ ಸಂರಕ್ಷಣಾ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments