Webdunia - Bharat's app for daily news and videos

Install App

ಶಾಲೆ ಶುಲ್ಕ ಕಟ್ಟದ್ದಕ್ಕೆ ಅನ್ ಲ್ಯೆನ್ ಕ್ಲಾಸ್ ಸ್ಥಗಿತ ! ಪೋಷಕರಿಂದ ಪ್ರತಿಭಟನೆ

Webdunia
ಭಾನುವಾರ, 6 ಫೆಬ್ರವರಿ 2022 (20:09 IST)
ಪ್ರಸಕ್ತ ಶೈಕ್ಷಣಿಕ ವರ್ಷದ ಪೂರ್ಣ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ತಮ್ಮ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣ ನಿಲ್ಲಿಸಿರುವ  ಈರೋಕಿಡ್ಸ್  ಸ್ಕೂಲ್ ಶಾಲೆಯ ಕ್ರಮ ಖಂಡಿಸಿ ಮಕ್ಕಳ ಪೋಷಕರು ಶಾಲೆಯ ಮುಂದೆ ಪ್ರತಿಭಟನೆ ನಡೆಸಿದರು.ಬೆಂಗಳೂರು ಉತ್ತರ ತಾಲ್ಲೂಕಿನದಾಸರಹಳ್ಳಿ ವಿಧಾನಾಸಭಾ ಕ್ಷೇತ್ರದ ಚಿಕ್ಕಬಾಣವಾರದ ಪುರಸಭೆಯಲ್ಲಿರುವ ಈರೋಕಿಡ್ಸ್ ಶಾಲೆಯ ವಿರುದ್ದ ಪೋಷಕರು ದಿಕ್ಕಾರ ಕೂಗಿ ಪ್ರತಿಭಟನೆ ಮಾಡಿದರು.ಈಗಾಗಲೆ ಕೊರೊನಾದಿಂದ ಬಹುತೇಕ ಜನರು ಉದ್ಯೋಗವನ್ನು ಕಳೆದುಕೊಂಡಿದ್ದಾರೆ, ಸರಿಯಾಗಿ ಕೆಲಸಗಳಿಲ್ಲದೇ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು, ಒಂದು ಹೊತ್ತಿನ ಊಟಕ್ಕೂ ಪರದಾಡುವಂತಾಗಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಅಮಾನವೀಯವಾಗಿ ವರ್ತಿಸುತ್ತಿವೆ, ಎರಡನೇ ಕಂತಿನ ಶುಲ್ಕ ಕಟ್ಡಿಲ್ಲ ಎಂದು ಆನ್ಲೈನ್ ಕ್ಲಾಸ್ ನಿಂದ ಬ್ಲಾಕ್ ಮಾಡಿದ್ದಾರೆ ಎಂದು ಪೋಷಕರು ತಮ್ಮ ಆಕ್ರೋಶವನ್ನು  ವ್ಯಕ್ತಪಡಿಸಿದ್ದಾರೆ.ಈರೋಕಿಡ್ಸ್  ಶಾಲೆಯ ಆಡಳಿತ ಮಂಡಳಿಯವರು ಮಕ್ಕಳನ್ನು ಆನ್ಲೈನ್ ಕ್ಲಾಸ್‌ ನಿಂದ‌ ಬ್ಲಾಕ್ ಮಾಡಲಾಗಿದ್ದು ಈ ವಿಚಾರವಾಗಿ ಕೇಳಲು ಹೋದ ಪೋಷಕರನ್ನು ಹೊರಹಾಕುವಂತೆ ಭದ್ರತಾ ಸಿಬ್ಬಂಧಿಗೆ ಸೂಚಿಸಲಾಗಿದೆ ಎಂದು ಪೋಷಕರು ತಮ್ಮ ಅಳಲನ್ನು ತೋಡಿಕೊಂಡರು.ಶಾಲಾ ಆವರಣದಲ್ಲಿ ಆಡಳಿತ ಮಂಡಳಿ ವಿರುದ್ಧ ದಿಕ್ಕಾರ ಕೂಗುತ್ತಾ ಪ್ರತಿಭಟನೆ ನಡೆಸಿದರು.‌ ಇದೇ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಾಣಾಧಿಕಾರಿ ಶಾಲೆ ಬಳಿ ಬಂದರು ಕೇರ್ ಮಾಡದೇ ಆಧಿಕಾರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪವು ಸಹ ವ್ಯಕ್ತವಾಯಿತು.ಈ ವೇಳೆ ಸೋಲದೇವನಹಳ್ಳಿ ಪೊಲೀಸರ ಮಧ್ಯಪ್ರವೇಶದಿಂದ ಆಡಳಿತ ಮಂಡಳಿಯವರ ಜೊತೆ ಮಾತನಾಡಿ ಸಮದಾನ ಪಡಿಸಿದರು. ಆದರೂ ಪೋಷಕರು ತಮ್ಮ ಪಟ್ಟು ಸಡಿಲಿಸದ ಕಾರಣ ಆಡಳಿತ ಮಂಡಳಿಯವರು ನಮ್ಮಿಂದ  ತಪ್ಪಾಗಿದೆ ದಯವಿಟ್ಟು ಕ್ಷಮಿಸಿ ಎಂದು ಪತ್ರ ಬರೆದು ಕೊಟ್ಟ ನಂತರ ಪ್ರತಿಭಟನೆ ಕೈ ಬಿಟ್ಟು ಪೋಷಕರು  ಹೊರನಡೆದರು.ಒಟ್ಟಿನಲ್ಲಿ ಖಾಸಗಿ ಶಾಲೆಗಳು ಮಕ್ಕಳ ಭವಿಷ್ಯದ ಜೊತೆ ಚಲ್ಲಾಟ ಮಾಡುವಿದನ್ನು ಬಿಡುತ್ತಾರ ಕಾಯ್ದುನೊಡಬೆಕಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments