Webdunia - Bharat's app for daily news and videos

Install App

ಹಂತ ಹಂತವಾಗಿ ರಾಜ್ಯ ಅನ್ ಲಾಕ್

Webdunia
ಶನಿವಾರ, 3 ಜುಲೈ 2021 (18:46 IST)
ಬೆಂಗಳೂರು : ಅನ್ ಲಾಕ್ 3.0 ಗೆ ಸರ್ಕಾರ ಅಸ್ತು ಎಂದಿದೆ. ಇದರ ಬೆನ್ನಲ್ಲೇ ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಕೊರೊನಾ ಕಂಟ್ರೋಲ್ ಗೆ ಮುಂದಾಗುತ್ತಿದೆ.ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ಹಂತ ಹಂತವಾಗಿ ರಾಜ್ಯ ಅನ್ ಲಾಕ್ ಆಗುತ್ತಿದೆ. ಅನ್ ಲಾಕ್ ಆದರೂ ಕೂಡ ಮತ್ತೆ ಕೊರೊನಾ ಹೆಚ್ಚಾಗುತ್ತೆ ಅನ್ನೋ ಆತಂಕ ಕೂಡ ಎದುರಾಗಿದೆ. ಹೀಗಾಗಿ ಅನ್ ಲಾಕ್ ಆದರೂ ಕೊರೊನಾ ನಿಯಂತ್ರಣಕ್ಕೆ ಬರಬೇಕು ಸೋಂಕು ಹೆಚ್ಚಾಗಬಾರದು ಎಂಬ ನಿಟ್ಟಿನಲ್ಲಿ ಇಂದು ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಮಹತ್ವದ ಸಭೆ ನಡೆಸಿದೆ. ಹೌದು, ಮಾಲ್, ಮಾರ್ಕೆಟ್ ಓಪನ್ ಆದರೆ ಸೋಂಕು ಹೆಚ್ಚಳವಾಗಬಹುದು. ಹೀಗಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಬಿಬಿಎಂಪಿ ಹಾಗೂ ಪೊಲೀಸ್ ಇಲಾಖೆ ಮುಂದಾಗಿದೆ. ಇನ್ನು ಇಂದು ನಡೆದ ಸಭೆಯಲ್ಲಿಯೂ ಸಾಕಷ್ಟು ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ಈ ಕುರಿತು ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಬಿಬಿಎಂಪಿ ಕಮಿಷನರ್ ಗೌರವ್ ಗುಪ್ತಾ ಹೇಳಿಕೆ ಪರಿಸ್ಥಿತಿಗೆ ತಕ್ಕಂತೆ ಕ್ರಮ ಕೈ ಗೊಳ್ಳಲಾಗುವುದು. ಆಗ ಜನ  ಅನ್ ಲಾಕ್ ಬಯಸುತ್ತಾರೆ. ಹೀಗಾಗಿ ಕಂಟ್ರೋಲ್ ರಿಲ್ಯಾಕ್ಸಿಯೇಷನ್ ಮಾಡಲು ಚಿಂತನೆ. ಅನ್ ಲಾಕ್ ಹಿನ್ನೆಲೆ ಮಾರ್ಷಲ್ ಗಳ ಸಂಖ್ಯೆ ಹೆಚ್ಚಳ ಮಾಡಲು ಚಿಂತಿಸಲಾಗಿದೆ. ಕೋವಿಡ್ ನ ಯಾವುದೇ ನಿಯಮ ಬ್ರೇಕ್ ಮಾಡಿದ್ರು ಮಾರ್ಷಲ್ ಕ್ರಮ ಕೈಗೊಳ್ಳಲಾಗುತ್ತದೆ ಎಂದರು. ಇನ್ನು ಇದೇ ವೇಳೆ ಮಾತನಾಡಿದ ಪೊಲೀಸ್ ಆಯುಕ್ತ ಕಮಲ್ ಪಂಥ್, ಪಾಲಿಕೆ ಮತ್ತು ನಗರ ಪೊಲೀಸ್ ಇಲಾಖೆ ಜಂಟಿಯಾಗಿ ಕೆಲಸ ಮಾಡಲಾಗಿದೆ. ಪಾಲಿಕೆಗೆ ಪೊಲೀಸ್ ಇಲಾಖೆ ಸಂಪೂರ್ಣ ಸಹಕಾರ ಕೊಡಲಿದೆ. ಮದುವೆ ಸಮಾರಂಭ, ಮಾರ್ಕೆಟ್, ಮಾಲ್ ಗಳ ಕಡೆಯಲ್ಲ ನಿಗಾ ಇಡಲಾಗುತ್ತೆ. ಯಾರೇ ಕೋವಿಡ್ ನಿಯಮ ಪಾಲಿಸದಿದ್ದರೆ ndma ಕಾಯ್ದೆ ಅಡಿ ದೂರು ದಾಖಲಾಗುತ್ತೆ. ಪೊಲೀಸ್ ಮತ್ತು  ಮಾರ್ಷಲ್ಸ್ ಮತ್ತು ಕೋವಿಡ್ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ ಕಠಿಣ ಕ್ರಮ ತೆಗೆದುಕೊಳ್ತೇವೆ ಎಂದರು. ಕೊರೊನಾ ನಿಯಂತ್ರಣದ ಜೊತೆಗೆ ಆರ್ಥಿಕ ವ್ಯವಸ್ಥೆ ಕೂಡ ಮುಖ್ಯ ಎಂಬ ನಿಟ್ಟಿನಲ್ಲಿ ಸರ್ಕಾರ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಜನ ಇದನ್ನ ಅರ್ಥ ಮಾಡಿಕೊಳ್ಳಬೇಕು. ಕೊರೊನ ನಿಯಮ ಪಾಲಿಸಬೇಕಾಗಿದೆ. ಇಲ್ಲದೇ ಹೋದರೆ ಕಾನೂನು ಕ್ರಮ  ಗ್ಯಾರಂಟಿಯಾಗಲಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಪ್ರದೇಶದಲ್ಲಿ ಖಾಸಗಿ ಬಸ್ ಏರಿದ ಯುವತಿಗೆ ಇದೆಂಥಾ ಶಾಕ್: ಬಸ್ ನಲ್ಲೇ ನಡೆಯಿತು ರೇಪ್ Video

ಸಚಿವರೆಂದರೆ ಹೀಗಿರಬೇಕು…ಬೆಳ್ಳಂ ಬೆಳಿಗ್ಗೆ ಕಸದ ಗಾಡಿ ಪಕ್ಕ ಕೃಷ್ಣ ಭೈರೇಗೌಡ ನೋಡಿ ಜನರಿಗೆ ಶಾಕ್: Video

ಉತ್ತರ ಪ್ರದೇಶದಲ್ಲಿ ರಸ್ತೆಯಲ್ಲಿ ಸಾಗುತ್ತಿದ್ದಾಗ ಮರ ಉರುಳಿ ವಿದ್ಯುತ್ ತಂತಿ ಸ್ಪರ್ಶಿಸಿದ ವ್ಯಕ್ತಿ: ಬದುಕುಳಿದಿದ್ದಕ್ಕೆ ಇವರೇ ಕಾರಣ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಟ ಪ್ರಕಾಶ್ ರಾಜ್ ಫ್ಲೆಕ್ಸ್ ಗೆ ಮಸಿ ಬಳಿದು ಗಲಾಟೆ: ಹಿಂದೂಗಳ ಬಗ್ಗೆ ಹೇಳಿಕೆಗೆ ಆಕ್ರೋಶ, ನಟನ ಪ್ರತಿಕ್ರಿಯೆ ಏನು

ಮುಂದಿನ ಸುದ್ದಿ
Show comments