Webdunia - Bharat's app for daily news and videos

Install App

ಅವಿವಾಹಿತ ಮಹಿಳೆಯರ ಫೋಟೋಗಳನ್ನು ತೆಗೆದು ಲಕ್ಷಾಂತರ ಹಣ ನೀಡುವಂತೆ ಬೆದರಿಕೆ

Webdunia
ಶುಕ್ರವಾರ, 4 ಫೆಬ್ರವರಿ 2022 (20:56 IST)
ಅವಿವಾಹಿತ ಮಹಿಳೆಯರನ್ನು ಸಾಮಾಜಿಕ ಜಾಲತಾಣದ ಮುಖಾಂತರ ಪರಿಚಯ ಮಾಡಿಕೊಂಡು ಅವರ ಅನುಮತಿಯಿಲ್ಲದೆ ಖಾಸಗಿ ಫೋಟೋಗಳನ್ನು ತೆಗೆದು ಲಕ್ಷಾಂತರ ಹಣ ನೀಡುವಂತೆ ಬೆದರಿಕೆ ಹಾಕುತ್ತಿದ್ದ ಚತ್ತೀಸ್ಘಡ ರಾಜ್ಯದ ಆರೋಪಿಯನ್ನು ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಭಿಷೇಕ್ ಅಲಿಯಾಸ್ ಸುಶಾಂತ್ ಜೈನ್ (33) ಬಂಧಿತ ಆರೋಪಿ. ಈತನಿಂದ 3 ಮೊಬೈಲ್ ಹಾಗೂ 3.60 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ.
ಈತ ಸಾಫ್ಟ್ವೇರ್ ಕಂಪೆನಿಯೊಂದನ್ನು ತೆರೆಯಲು ತಯಾರಿ ಮಾಡಿಕೊಳ್ಳುತ್ತಿದ್ದನು. ಆರೋಪಿ ಅಭಿಷೇಕ್ಗೆ ವಿವಾಹವಾಗಿ ಪತ್ನಿ, ಮಕ್ಕಳಿದ್ದರೂ ಸಹ ಟೆಂಡರ್ ಎಂಬ ಆಯಪ್ ಮುಖಾಂತರ ಅವಿವಾಹಿತ ಮಹಿಳೆಯರನ್ನು ಪರಿಚಯ ಮಾಡಿಕೊಂಡು ಅವರನ್ನು ಪುಸಲಾಯಿಸಿ ವಿಶ್ವಾಸಗಳಿಸುತ್ತಿದ್ದನು.
 
ಡೇಟಿಂಗ್ ಮಾಡುವ ಮತ್ತು ಅವರ ಖಾಸಗಿ ಫೋಟೋಗಳನ್ನು ಕ್ಲಿಕ್ಕಿಸಿಕೊಂಡು ನಂತರ ಹಣಕ್ಕಾಗಿ ಬೇಡಿಕೆ ಇಡುವ ಪ್ರವೃತ್ತಿ ಉಳ್ಳವನಾಗಿರುತ್ತಾನೆ.
ಕೊಡಿಗೆಹಳ್ಳಿಯಲ್ಲಿ ಅವಿವಾಹಿತ ಮಹಿಳೆಯನ್ನು ಟೆಂಡರ್ ಆಫ್ ಮೂಲಕ ಪರಿಚಯ ಮಾಡಿಕೊಂಡು ಅವರ ಮೊಬೈಲ್ ನಂಬರ್ ಪಡೆದುಕೊಂಡು ಅವರಿಗೆ ಫೋನ್ಕಾಲ್ ಮತ್ತು ಮೆಸೇಜ್ ಮಾಡಿ ಪುಸಲಾಯಿಸಿದ್ದಾನೆ.
 
ಫೆ.1ರಂದು ಬೆಳಗ್ಗೆ ಆರೋಪಿ ಅಭಿಷೇಕ್ ಮಹಿಳೆ ಮನೆಗೆ ಹೋಗಿ ಬಲವಂತವಾಗಿ ಅವರನ್ನು ವಿವಸ್ತ್ರಗೊಳಿಸಿ ಅನುಮತಿಯಿಲ್ಲದೆ ಅವರ ಖಾಸಗಿ ಫೋಟೋಗಳನ್ನು ತನ್ನ ಮೊಬೈಲ್ನಲ್ಲಿ ತೆಗೆದುಕೊಂಡು ಹೋಗಿದ್ದನು. ತದನಂತರ ಈ ಮಹಿಳೆಗೆ ಕರೆ ಮಾಡಿ ಲಕ್ಷಾಂತರ ರೂ. ಹಣ ನೀಡುವಂತೆ ಕೇಳಿದ್ದಾನೆ. ಹಣ ಕೊಡದಿದ್ದರೆ ನಿಮ್ಮ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments