Webdunia - Bharat's app for daily news and videos

Install App

ಸಿದ್ದರಾಮಯ್ಯ ಆಶೀರ್ವಾದ ಇರೋವರೆಗೆ ಸರ್ಕಾರ ಭದ್ರ ಎಂದ ಸಿಎಂ

Webdunia
ಮಂಗಳವಾರ, 14 ಮೇ 2019 (13:33 IST)
ಕುಂದಗೋಳದಲ್ಲಿ ಪ್ರಚಾರ ಮಾಡಿದ ಸಿಎಂ ಎಚ್ ಡಿ ಕುಮಾರಸ್ವಾಮಿ, 'ಉಪಚುನಾವಣೆ ಯಾರು ನಿರೀಕ್ಷೆ ಮಾಡಿ ಬಂದಿರೋದಲ್ಲ. ಮೈತ್ರಿ ಸರ್ಕಾರದಲ್ಲಿ ಸಿ.ಎಸ್ ಶಿವಳ್ಳಿ ನನಗೆ ಆತ್ಮೀರಾಗಿದ್ದರು. ಬಡವರ ಪರ ಕೆಲಸ ಮಾಡೋ ಸಚಿವರಾಗಿದ್ದರು. ಅವರ ನಿಧನದ ಹಿಂದಿನ ದಿನ ನಾನು ಶಿವಳ್ಳಿ ಅವರನ್ನು ಭೇಟಿಯಾಗಿದ್ದೆ' ಎಂದರು. 

ತಂದೆ ಸಾವಿನ ನೋವಿನ ಸಂದರ್ಭದಲ್ಲಿ ಶಿವಳ್ಳಿ ಪುತ್ರಿ ಪರೀಕ್ಷೆ ಬರೆದ ವಿಚಾರದ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ. 'ಆ ಮಕ್ಕಳು ಶಿವಳ್ಳಿ ನೀಡಿದ ಆಸ್ತಿ ಎಂದು ಕುಸುಮಾ ಶಿವಳ್ಳಿಗೆ ಹೇಳಿದ್ದೇನೆ. ಸಿದ್ದರಾಮಯ್ಯ ಆಶೀರ್ವಾದ ಇರೋವರೆಗೆ ಸಮ್ಮಿಶ್ರ ಸರ್ಕಾರಕ್ಕೆ ಏನು ಆಗಲ್ಲ. ಜನರ ಆಶೀರ್ವಾದ ಇರೋವರಗೆ ಸಮ್ಮಿಶ್ರ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ' ಎಂದು ಗುಡುಗಿದರು.

ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಧಾರವಾಡ ಜಿಲ್ಲೆಗೆ 290 ಕೋಟಿ ಸಿಕ್ಕಿದೆ. ಹೀಗಿದ್ದರೂ ಸಮ್ಮಿಶ್ರ ಸರ್ಕಾರ ಯಾಕೆ ಪತನ ಆಗ್ಬೇಕು? ಎಂದು ಪ್ರಶ್ನಿಸಿದ್ರು. ಬಡವರ ಪರವಾಗಿದ್ದ ಸಿ.ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾ ಅವರನ್ನ ಯಾವುದೇ ಕಾರಣಕ್ಕೂ ಕೈ ಬಿಡಬೇಡಿ, ಅವರನ್ನ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments