ಸಿದ್ದರಾಮಯ್ಯ ಆಶೀರ್ವಾದ ಇರೋವರೆಗೆ ಸರ್ಕಾರ ಭದ್ರ ಎಂದ ಸಿಎಂ

Webdunia
ಮಂಗಳವಾರ, 14 ಮೇ 2019 (13:33 IST)
ಕುಂದಗೋಳದಲ್ಲಿ ಪ್ರಚಾರ ಮಾಡಿದ ಸಿಎಂ ಎಚ್ ಡಿ ಕುಮಾರಸ್ವಾಮಿ, 'ಉಪಚುನಾವಣೆ ಯಾರು ನಿರೀಕ್ಷೆ ಮಾಡಿ ಬಂದಿರೋದಲ್ಲ. ಮೈತ್ರಿ ಸರ್ಕಾರದಲ್ಲಿ ಸಿ.ಎಸ್ ಶಿವಳ್ಳಿ ನನಗೆ ಆತ್ಮೀರಾಗಿದ್ದರು. ಬಡವರ ಪರ ಕೆಲಸ ಮಾಡೋ ಸಚಿವರಾಗಿದ್ದರು. ಅವರ ನಿಧನದ ಹಿಂದಿನ ದಿನ ನಾನು ಶಿವಳ್ಳಿ ಅವರನ್ನು ಭೇಟಿಯಾಗಿದ್ದೆ' ಎಂದರು. 

ತಂದೆ ಸಾವಿನ ನೋವಿನ ಸಂದರ್ಭದಲ್ಲಿ ಶಿವಳ್ಳಿ ಪುತ್ರಿ ಪರೀಕ್ಷೆ ಬರೆದ ವಿಚಾರದ ಬಗ್ಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ. 'ಆ ಮಕ್ಕಳು ಶಿವಳ್ಳಿ ನೀಡಿದ ಆಸ್ತಿ ಎಂದು ಕುಸುಮಾ ಶಿವಳ್ಳಿಗೆ ಹೇಳಿದ್ದೇನೆ. ಸಿದ್ದರಾಮಯ್ಯ ಆಶೀರ್ವಾದ ಇರೋವರೆಗೆ ಸಮ್ಮಿಶ್ರ ಸರ್ಕಾರಕ್ಕೆ ಏನು ಆಗಲ್ಲ. ಜನರ ಆಶೀರ್ವಾದ ಇರೋವರಗೆ ಸಮ್ಮಿಶ್ರ ಸರ್ಕಾರ ಅಲುಗಾಡಿಸಲು ಸಾಧ್ಯವಿಲ್ಲ' ಎಂದು ಗುಡುಗಿದರು.

ಸಮ್ಮಿಶ್ರ ಸರ್ಕಾರ ರಚನೆಯಾದ ಬಳಿಕ ಧಾರವಾಡ ಜಿಲ್ಲೆಗೆ 290 ಕೋಟಿ ಸಿಕ್ಕಿದೆ. ಹೀಗಿದ್ದರೂ ಸಮ್ಮಿಶ್ರ ಸರ್ಕಾರ ಯಾಕೆ ಪತನ ಆಗ್ಬೇಕು? ಎಂದು ಪ್ರಶ್ನಿಸಿದ್ರು. ಬಡವರ ಪರವಾಗಿದ್ದ ಸಿ.ಎಸ್ ಶಿವಳ್ಳಿ ಅವರ ಪತ್ನಿ ಕುಸುಮಾ ಅವರನ್ನ ಯಾವುದೇ ಕಾರಣಕ್ಕೂ ಕೈ ಬಿಡಬೇಡಿ, ಅವರನ್ನ ಗೆಲ್ಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್: ಹೀಗೊಂದು ಬಾಂಬ್ ಹಾಕಿದ್ದು ಯಾರು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕುರ್ಚಿ ತಿಕ್ಕಾಟಕ್ಕೆ ಸ್ಪೋಟಕ ತಿರುವು

Karnataka Weather: ಸೈಕ್ಲೋನ್ ಇಫೆಕ್ಟ್, ಕರ್ನಾಟಕದಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ಮುಂದಿನ ಸುದ್ದಿ
Show comments